ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ): ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ ಸಹ ಪ್ರಯಾಣಿಕ ಸ್ಥಳದಲ್ಲೇ ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ 66 ರ ಸಂತೆ ಕಟ್ಟೆ ಬಳಿ ನಡೆದಿದೆ. ಮೃತಪಟ್ಟವರನ್ನು ಕುಂದಾಪುರ ತಾಲೂಕಿನ ಹೇರಿಕೇರಿ ಗ್ರಾಮದ ನಿವಾಸಿಗಳಾದ ದಿನೇಶ್ (35 )ಮತ್ತು ಮಂಜು (21) ಎಂದು ಗುರುತಿಸಲಾಗಿದೆ.ಟೆಂಪೋ ಕುಂದಾಪುರದಿಂದ ಉಡುಪಿಯ ಕಡೆಗೆ ತೆರಳುತ್ತಿತ್ತು , ಉಡುಪಿ ಎ ಪಿ ಎಂ ಸಿ ಮಾರುಕಟ್ಟೆಗೆ ತರಕಾರಿ ಕೊಂಡುಕೊಳ್ಳಲು ಮುಂಜಾನೆ ಟೆಂಪೋ ಟ್ರಾಕ್ಸ್ ನಲ್ಲಿ ತೆರಳುತ್ತಿದ್ದಾಗ ಸಂತೆಕಟ್ಟೆ ಆಶೀರ್ವಾದ ಚಿತ್ರ ಮಂದಿರದ ಬಳಿ ಇರುವ ಸೂಚನಾ ಫಲಕಕ್ಕೆ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಢಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.