ಪಾಂಡೇಶ್ವರ (www.vknews.com) : ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್ನಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 20 ರಂದು ಕ್ಯಾಂಪಸ್ನ ಬೋಧಕ ಬೋಧಕೇತರ ಸಿಬ್ಬಂದಿಗಳು ಆಚರಿಸಿದರು.
ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್. ಐತಾಳ್ ಮಾತನಾಡಿ, ಯೋಗದಿಂದ ಎಲ್ಲಾ ರೀತಿಯ ರೋಗಗಳನ್ನು ತಡೆಯಬಹುದು. ಇದರಿಂದ ವ್ಯಕ್ತಿಯೊಬ್ಬನ ರೋಗ ನಿರೋಧಕ ಶಕ್ತಿಯನ್ನು ಸುಧಾರಿಸುವ ಮೂಲಕ ಕೊರೋನವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಪ್ರಪಂಚದ ಎಲ್ಲಾ ಜನರು ಭಾರತೀಯ ಯೋಗವನ್ನು ಸ್ವೀಕರಿಸಿ ಅನುಸರಿಸುತ್ತಿರುವುದು ಭಾರತೀಯರಿಗೆ ಹೆಮ್ಮೆಯನ್ನು ನೀಡುತ್ತಿದೆ.
ಸಂಪನ್ಮೂಲ ವ್ಯಕ್ತಿಯಾಗಿ ಕದ್ರಿ ಕೈಬಟ್ಟಲಿನ ಪ್ರಕೃತಿ ಯೋಗ ಕುಠೀರದ ಸ್ಥಾಪಕ ಹಾಗೂ ನಿರ್ದೇಶಕ ರಾಧಾಕೃಷ್ಣ ಗುರುಜಿಯವರು ಓಕಾಂರದೊಂದಿಗೆ ವಿವಿಧ ಆಸನಗಳು ಮತ್ತು ಅದರ ಪ್ರಯೋಜನ ಹಾಗೂ ಮಹತ್ವಗಳನ್ನು ತಿಳಿಸಿದರು.
ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್. ಐತಾಳ್, ಕುಲಸಚಿವ (ಅಭಿವೃದ್ಧಿ) ಡಾ. ಅಜಯ್ ಕುಮಾರ್, ಕಾಲೇಜ್ ಆಫ್ ಫಿಸಿಯೋಥೆರಪಿಯ ಡೀನ್ ಡಾ. ಎಸ್ ರಾಜಶೇಖರ್ ಹಾಗೂ ಸಿಟಿ ಕ್ಯಾಂಪಸ್ನ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.