ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ವಿಜಯ ನಗರ ಸಾಮ್ರಾಜ್ಯದ ರಾಜಧಾನಿಯನ್ನು ನೋಡಿದ ಕೆಂಪೇಗೌಡರಿಗೆ ತಮ್ಮ ನಾಡಿನಲ್ಲಿ ಅಂತಹ ನಗರ ನಿರ್ಮಿಸುವ ಕನಸು ಮೂಡಿತು. ಅವರ ಛಲ-ಪ್ರಯತ್ನಗಳಿಂದ ಇಂದಿಗೂ ನಾಡ ಪ್ರಭುವೆಂದು ಬಿರುದು ಪಡೆದಿದ್ದಾರೆ ಎಂದು ಬಂಟ್ವಾಳ ತಾಲೂಕು ಕಛೇರಿ ಕಂದಾಯ ಶಿರಸ್ತೇದಾರ್ ರಾಜೇಶ್ ನಾಯ್ಕ್ ಹೇಳಿದರು.
ಶನಿವಾರ ಬಿ ಸಿ ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಮಾತನಾಡಿ ಕೆಂಪೇಗೌಡರು ನಮ್ಮ ರಾಜಧಾನಿ ಬೆಂಗಳೂರು ನಗರದ ನಿರ್ಮಾತೃ. ಇದು ಇಂದು ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿ ಮೂಡಿ ಬಂದಿದೆ. ಕೆಂಪೇಗೌಡರ ದೂರದೃಷ್ಟಿ ಅದಕ್ಕಾಗಿ ಹಣವನ್ನು ಕ್ರೋಡೀಕರಿಸಿದ ರೀತಿ ಇವೆಲ್ಲವೂ ನಮಗೆ ಮಾದರಿಯಾಗಿವೆ ಎಂದರು.
ಈ ಸಂದರ್ಭ ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ಉಪಸ್ಥಿತರಿದ್ದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಸ್ವಾಗತಿಸಿ ವಂದಿಸಿದರು.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.