ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸುಳ್ಯದ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದರ ಮುಂಭಾಗದ ತಡೆಗೋಡೆ ಕುಸಿದಿದ್ದು ಮತ್ತು ಜಟ್ಟಿಪಳ್ಳ ಹಿರಿಯ ಪ್ರಾಥಮಿಕ ಶಾಲೆಯ ಬದಿಯ ಅವರಣ ಗೋಡೆ ಕುಸಿದು ಬಿದ್ದಿದ್ದು, ವಿದ್ಯಾರ್ಥಿಗಳಹಿತದೃಷ್ಟಿಯಿಂದ ಇದನ್ನು ಶೀಘ್ರವಾಗಿ ಸರಿಪಡಿಸುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಗಾಂಧಿನಗರ ಯುನಿಟ್ ವತಿಯಿಂದ ಸುಳ್ಯ ಬಿಇಒ ಕಛೇರಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಗಾಂಧಿನಗರ ಯುನಿಟ್ ಕಾರ್ಯದರ್ಶಿಯಾದ ಸುಹೈಲ್ ಸುಳ್ಯ, ಏರಿಯಾ ಸಮಿತಿ ಸದಸ್ಯರಾದ ಶಮಾಲ್ ಸುಳ್ಯ, ಹುಲೈಫ್ ಸುಳ್ಯ, ಅಶ್ರಫ್ ಸುಳ್ಯ, ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.