ಬಂಟ್ವಾಳ (ವಿಶ್ವ ಕನ್ನಡಿಗ ನ್ಯೂಸ್): ಕಾಂಗ್ರೆಸ್ ನ ನಿಷ್ಠಾವಂತ ನಾಯಕರಾಗಿ,ಜಿಲ್ಲಾ ಪಂಚಾಯತ್ ಸದಸ್ಯರಾಗಿ,ಸಜೀಪ ನಡು ಜುಮಾ ಮಸೀದಿಯಲ್ಲಿ ಹಲವು ವರ್ಷಗಳ ಕಾಲ ಅಧ್ಯಕ್ಷರಾಗಿ,ಸಜೀಪ ರೇಂಜ್ ಮದ್ರಸ ಮೆನೇಜ್ಮೆಂಟ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ, ದ.ಕ.ಜಿಲ್ಲಾ ಮದ್ರಸ ಮೆನೇಜ್ಮೆಂಟ್ ಅಸೋಸಿಯೇಷನ್ ನ ಪದಾಧಿಕಾರಿಯಾಗಿ, ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರಾಗಿ ಸೇವೆಸಲ್ಲಿಸಿರುವ ಮಾನ್ಯ S ಅಬ್ಬಾಸ್ ಹಾಜಿ ಸಜೀಪ ರವರು ಅಲ್ಪ ಕಾಲದ ಅನಾರೋಗ್ಯದ ಬಳಿಕ ಇಂದು ನಿಧನರಾದರು.ಅವರಿಗೆ 69 ವರ್ಷವಾಗಿತ್ತು.
ತಮ್ಮ ಜೀವಿತಾವಧಿಯಲ್ಲಿ ಎಲ್ಲರೊಂದಿಗೆ ಉತ್ತಮ ರೀತಿಯಲ್ಲಿ ಬಾಂಧವ್ಯ ಹೊಂದಿದ್ದ ಇವರು ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದರು.ಇವರಿಗೆ ಪತ್ನಿ,ಇಬ್ಬರು ಪುತ್ರರು,ಮೂವರು ಪುತ್ರಿಯರಿದ್ದಾರೆ.ಇವರ ಅಕಾಲಿಕ ನಿಧನಕ್ಕೆ ಕಾಂಗ್ರೆಸ್ ಮುಖಂಡರುಗಳು,ದೇಶ ವಿದೇಶದಲ್ಲಿರುವ ಸಾಮಾಜಿಕ-ಧಾರ್ಮಿಕ ಸಂಘಟನೆಗಳ ಗಣ್ಯರು ಸೇರಿ ಹಲವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.