ಚಿಕ್ಕಬಳ್ಳಾಪುರ,(ವಿಶ್ವಕನ್ನಡಿಗ ನ್ಯೂಸ್): ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡಲು ಪ್ರಥಮ ಆದ್ಯತೆ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಝೀಯಾ ತರುನ್ನುಮ್ ಸೂಚಿಸಿದರು.
ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಹಾಗೂ ಅರೂರು ಗ್ರಾಮ ಪಂಚಾಯಿತಿಯ ಜಂಟಿ ಸಹಭಾಗಿತ್ವದಲ್ಲಿ ಆವುಲನಾಗೇನಹಳ್ಳಿ ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಘನ ಮತ್ತು ದ್ರವ ತ್ಯಾಜ್ಯ ಘಟಕಕ್ಕೆ ಭೇಟಿ ನೀಡಿ ಕೈಗೊಂಡಿರುವ ಕಾಮಗಾರಿಯನ್ನು ವೀಕ್ಷಿಸಿ ಘಟಕ ಪ್ರಾರಂಭಿಸಲು ಉಳಿದ ಕಾಮಗಾರಿಗಳನ್ನು ಅತೀ ಶ್ರೀಘ್ರದಲ್ಲಿ ಪೂರ್ಣಗೊಳಿಸಿ ಕಾರ್ಯಾಚರಣೆಗೆ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಗರ ಪ್ರದೇಶದ ಮಾದರಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸಹ ನೈರ್ಮಲ್ಯ ಕಾಪಾಡಲು ಕಸಕಡ್ಡಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಘನ ಮತ್ತು ದ್ರವ ತ್ಯಾಜ್ಯ ಘಟಕಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಗ್ರಾಮಸ್ಥರು ಸಹ ಯೋಜನೆಯನ್ನು ಯಶಸ್ವಿಇಗೊಳಿಸಲು ಸಹಕಾರ ನೀಡಬೇಕೆಂದು ಕೋರಿದರು.
ಚಿಕ್ಕಬಳ್ಳಾಪುರ ತಾಪಂ ಇಓ ಎಸ್.ಎಲ್ ಹರ್ಷವರ್ಧನ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಶಿವಕುಮಾರ್ ಜಿ.ಲೋಕೂರ್ ,ಪೆರೇಸಂದ್ರ ಗ್ರಾಮ ಪಂಚಾಯಿತಿ ಅಭಿವೃಧ್ಧಿ ಅಧಿಕಾರಿ ಮುನಿರಾಜು,ಅರೂರು ಗ್ರಾಮ ಪಂಚಾಯಿತಿಯ ಅಭಿವೃಧ್ಧಿ ಅಧಿಕಾರಿ ಮದ್ದರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.