ರಾಯಲ್ಪಾಡು(ವಿಶ್ವಕನ್ನಡಿಗ ನ್ಯೂಸ್): ಜೀವನವೆಂದ ಮೇಲೆ ಸುಖ, ಕಷ್ಟ, ಸ್ವಾಸ್ಥ್ಯ , ರೋಗರುಜಿನಗಳು ಇದ್ದೇ ಇರುತ್ತವೆ . ರೋಗಗಳು ಬಾಧಿಸಲು ಆರಂಭಿಸಿದಾಗ ಔಷಧವನ್ನು ಪರಮಶತ್ರುವಿನಂತೆ ಕಾಣುವ ಅದೆಷ್ಟೋ ಜನರಿರುತ್ತಾರೆ. ಇದಲ್ಲದೆ ಗ್ರಾಮೀಣ ಭಾಗದಲ್ಲಿ ಕೆಲವರು ಆಸ್ಪತ್ರೆಯನ್ನು ಸಹ ಪರಮಶತ್ರುವಿನಂತೆ ಕಾಣುವಂತವರು ಇದ್ದಾರೆ.
ಗ್ರಾಮೀಣ ಭಾಗದ ನಾಗರೀಕರಲ್ಲಿ ಆಸ್ಪತ್ರೆ ಎಂದರೆ ಇಂಜಕ್ಷನ್ ಕೊಡುವಂತಹ, ಆಪರೇಷನ್ ಮಾಡುವಂತಹ ಸ್ಥಳ ಎಂಬ ಭಯದ ವಾತವರಣ ಹಾಗು ಆಸ್ಪತ್ರೆಗೆ ಹೋದರೆ ಇಲ್ಲಸಲ್ಲದ ಪರೀಕ್ಷೆಗಳನ್ನು ಮಾಡಿ ಮಾನಸಿಕವಾಗಿ ಹಿಂಸೆಯಾಗುತ್ತದೆ ಹಾಗು ಜೇಬು ಖಾಲಿಯಾಗುತ್ತದೆ ಎನ್ನುವಂತಹ ಜನರು ಗ್ರಾಮೀಣ ಭಾಗದಲ್ಲಿದ್ದು, ಇನ್ನು ಕೆಲವರು ಆಕಸ್ಮಿಕವಾಗಿ ಖಾಯಿಲೆ ಬಂದರೆ ಹಳ್ಳಿಗಳಲ್ಲಿನ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರಿಲ್ಲದೆ , ನಗರ ಪ್ರದೇಶಕ್ಕೆ ಹೋಗಲು ಸಾಧ್ಯವಾಗದೆ ಖಾಯಿಲೆಯಿಂದ ಬಳಲುವ ಜನರಿದ್ದಾರೆ.
ಇಂತಹ ಸಮಯದಲ್ಲಿ ರಾಯಲ್ಪಾಡು ಹೋಬಳಿಯ ಅಡ್ಡಗಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರತಿದಿನ ನೂರಾರು ಜನ ಬಂದು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ರೋಗಿಗೆ ಚಿಕಿತ್ಸೆಯ ಜೊತೆಗೆ ಮಾನಸ್ಸಿಗೆ ನೆಮ್ಮದಿ ನೀಡುವಂತಹ ಅತ್ಯುತ್ತಮ ಪರಿಸರವು ಆವರಣದಲ್ಲಿ ಸೃಷ್ಟಿಯಾಗಿದೆ. ಉತ್ತಮ ವಾತವರಣವು ಸೃಷ್ಟಿಯಾಗಲು ಸ್ಥಳೀಯ ಆರೋಗ್ಯಕೇಂದ್ರ ಸಿಬ್ಬಂದಿಯು ಮನಸವಾಚ ಕಾರ್ಯನಿರ್ವಹಿಸುತ್ತಿದೆ.
ಇನ್ನು ವೈದ್ಯರು “ವೈದ್ಯೋ ನಾರಾಯಣ ಹರಿಃ” ಎಂಬಂತೆ ವೈದ್ಯರು ಆರೋಗ್ಯ ಕೇಂದ್ರಕ್ಕೆ ಬರುವ ಅನಾರೋಗ್ಯವಂತರಿಗೆ ಅಕ್ಕರೆಯಿಂದ ಉತ್ತಮ ಚಿಕಿತ್ಸೆಯನ್ನು ನೀಡುತ್ತಾ , ರೋಗಿಯ ಸಮಸ್ಯೆಯನ್ನು ಆಲಿಸಿ , ಪರಿಶೀಲಿಸಿ ಸಮಸ್ಯೆಗೆ ತಕ್ಕಂತೆ ಕಡಿಮೆ ವೆಚ್ಚದ ಪರಿಹಾರದ ಚಿಕಿತ್ಸೆಯನ್ನು ನೀಡುತ್ತಾ , ಈ ಭಾಗದ ನಾಗರೀಕರೆಲ್ಲರ ಮನೆಮಾತಾಗಿದ್ದಾರೆ.
ಸಾಮಾನ್ಯವಾಗಿ ಗ್ರಾಮೀಣ ಭಾಗದ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೊರತೆ ಎದ್ದು ಕಾಣುತ್ತದೆ ಆದರೆ ಅಡ್ಡಗಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾತ್ರ ವೈದ್ಯರು ಸದಾ ಸಾರ್ವಜನಿಕರ ಸೇವೆಯಲ್ಲಿ ನಿರತರಾಗಿರುತ್ತಾರೆ ಎಂಬ ಮಾತು ಈ ಭಾಗದ ನಾಗರೀಕರಲ್ಲಿ ಕೇಳಿಬುರುತ್ತದೆ.
ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.