ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ತಾಲೂಕು ಪ್ರವಾಸ ಮಂಗಳೂರು (www.vknews.com): ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದ.ಕ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು.
ಜುಲೈ 27 ರಂದು ಬೆಳಿಗ್ಗೆ 11 ಗಂಟೆಗೆ ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2.30 ಗಂಟೆಗೆ ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರ ಮತ್ತು ಜುಲೈ 28 ರಂದು ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರ, ಜುಲೈ 29 ರಂದು ಬೆಳಿಗ್ಗೆ 11 ಗಂಟೆಗೆ ಮೂಡಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರ, ಮದ್ಯಾಹ್ನ 2.30 ಗಂಟೆಗೆ ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರಗಳಿಗೆ ಭೇಟಿ ನೀಡುವರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000 ಸಂಪರ್ಕಿಸಲು ದ.ಕ ಜಿಲ್ಲೆ ಭ್ರಷ್ಟಾಚಾರ ನಿಗ್ರಹದಳದ ಆರಕ್ಷಕ ಉಪಾಧೀಕ್ಷಕರ ಪ್ರಕಟನೆ ತಿಳಿಸಿದೆ.
ಅಧಿಕಾರ ಸ್ವೀಕಾರ
ಭಾರತ ಸರಕಾರದ ಮುಖ್ಯ ಕಾರ್ಮಿಕ ಆಯುಕ್ತರಾಗಿ ಶಶಿ ನೇಗಿ (1987ರ ಸಿ.ಎಲ್.ಎಸ್. ಬ್ಯಾಚ್ನ) ಜುಲೈ 16 ರಂದು ಅಧಿಕಾರ ಸ್ವೀಕರಿಸಿರುತ್ತಾರೆ. ಇವರು ಭಾರತದ ಮೊದಲ ಮಹಿಳಾ ಮುಖ್ಯ ಕಾರ್ಮಿಕ ಆಯುಕ್ತರಾಗಿರುತ್ತಾರೆ. ಹಾಗೂ ಈ ಹುದ್ದೆಯನ್ನು ಅಲಂಕರಿಸುವ ಮೊದಲು ಕಾರ್ಮಿಕ ಆಯುಕ್ತರಾಗಿ, ಅಪರ ಮುಖ್ಯ ಕಾರ್ಮಿಕ ಆಯುಕ್ತರಾಗಿ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಕಾರ್ಮಿಕ ಕಲ್ಯಾಣ ಆಯುಕ್ತರಾಗಿ ಹಾಗೂ ಡೆಪ್ಯುಟಿ ಡೈರೆಕ್ಟರ್ ಜನರಲ್ (ಕಾರ್ಮಿಕ ಕಲ್ಯಾಣ) ಆಗಿ ಸೇವೆ ಸಲ್ಲಿಸಿರುತ್ತಾರೆ.
ತೆಂಗು ಫಸಲು ಬಹಿರಂಗ ಹರಾಜು
ದಕ್ಷಿಣಕನ್ನಡ ಜಿಲ್ಲೆಯ ತೋಟಗಾರಿಕೆ ಕ್ಷೇತ್ರ/ನರ್ಸರಿಗಳಲ್ಲಿನ 2020-21ನೇ ಸಾಲಿನ ತೆಂಗು ಫಸಲನ್ನು ಆಗಸ್ಟ್ 6 ರಂದು ಬೆಳಿಗ್ಗೆ ಕಛೇರಿ ನರ್ಸರಿ ಬೆಳ್ತಂಗಡಿ, ಹಾಗೂ ಮಧ್ಯಾಹ್ನ ಚಾರ್ಮಾಡಿ ಹಳೆಬಂಗ್ಲೆ ಸಸ್ಯಗಾರ, ಬೆಳ್ತಂಗಡಿ, ಇಲ್ಲಿ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಆಸಕ್ತರು ಹರಾಜಿನಲ್ಲಿ ಭಾಗವಹಿಸಲು. ವಿಲೇವಾರಿ ಷರತ್ತುಗಳು ಹಾಗೂ ಹೆಚ್ಚಿನ ವಿವರಗಳಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ ಮಂಗಳೂರು ಕಛೇರಿ ಹಾಗೂ ಕ್ಷೇತ್ರಗಳಲ್ಲಿ ಸಂಪರ್ಕಿಸಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
ಭತ್ತದ ಬೆಳೆಗೆ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆ
ಕರ್ನಾಟಕರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟಕ್ಕೆ ಬೆಳೆ ವಿಮೆ ಯೋಜನೆಯಡಿ ನೋಂದಣೆಗೆ ಆಗಸ್ಟ್ 14 ಕೊನೆಯ ದಿನವಾಗಿದೆ. ರೈತರು ಭತ್ತ (ಮಳೆ ಆಶ್ರಿತ) ಬೆಳೆಗೆ ಪತ್ರಿ ಎಕರೆಗೆ ರೂ.440 ಅಥವಾ ಹೆಕ್ಟೇರಿಗೆ ರೂ. 1100 ವಂತಿಗೆ ನೀಡಬೇಕಿದೆ.
ಹೊಸ ಮಾರ್ಗಸೂಚಿಯನ್ವಯ ಈ ಬಾರಿ ಸಾಲ ಪಡೆದ ರೈತರಿಗೆ ಬೆಳೆ ವಿಮೆಯಡಿ ಒಳಪಡುವುದು ಐಚ್ಛಿಕವಾಗಿರುತ್ತದೆ. ಆಸಕ್ತಿ ಇಲ್ಲದ ರೈತರು ಬ್ಯಾಂಕ್ಗಳಲ್ಲಿ ನಿರಾಕರಣಾ ಪತ್ರವನ್ನು ನೀಡಿ ನೋಂದಣಿಯಿಂದ ಹೊರ ಉಳಿಯಬಹುದು.(ನಿರಾಕರಣಾ ಪತ್ರವನ್ನು ನೊಂದಣಿಯ ಕೊನೆಯ ದಿನಾಂಕಕ್ಕಿಂತ ಏಳು ದಿನ ಮುಂಚಿತವಾಗಿ ನೀಡಬೇಕು)
ಸಲ್ಲಿಸಬೇಕಾದ ದಾಖಲೆಗಳು:- ಅರ್ಜಿ, ಪಹಣಿ, ಖಾತೆ, ಪಾಸ್ಪುಸ್ತಕ, ಕಂದಾಯ ರಶೀದಿ, ಆಧಾರ್ ಕಾರ್ಡ್ ಹೊಂದಿರಬೇಕು. ಬೆಳೆ ಕಟಾವು ಪ್ರಯೋಗಗಳ ಆಧಾರದ ಮೇಲೆ ಇಳುವರಿ ಮಾಹಿತಿಯನ್ನು ಪರಿಗಣಿಸಿ ಬೆಳೆ ನಷ್ಟ ನಿರ್ಧಾರ ಒಟ್ಟಾರೆ ಪ್ರದೇಶಕ್ಕೆ ಮಾಡಲಾಗುವುದು. ಬಿತ್ತನೆ ವಿಫಲಗೊಂಡಲ್ಲಿ – ಮಳೆಯ ಅಭಾವ/ಪ್ರತಿಕೂಲ ಹವಾಮಾನ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರ ವಿಫಲಗೊಂಡಲ್ಲಿ ಶೇ.25ರಷ್ಟು ಪರಿಹಾರ ವರದಿ ಮಾಡಿಕೊಳ್ಳಲು ಆಗಸ್ಟ್ 22 ಕೊನೆಯ ದಿನ.
ಮಧ್ಯಂತರ ವಿಕೋಪಗಳಾದ – ಆಲಿಕಲ್ಲು ಮಳೆ, ಭೂಕುಸಿತ, ಬೆಳೆ ಮುಳುಗಡೆ, ಬೆಂಕಿ ಅವಘಡಗಳಿಗೆ ವೈಯಕ್ತಿಕವಾಗಿ ನಿರ್ಧಾರ, 72 ಗಂಟೆಯೊಳಗೆ ವಿಮಾ ಸಂಸ್ಥೆಗೆ ಮಾಹಿತಿ ನೀಡಬೇಕಾಗಿರುತ್ತದೆ. ಬಿತ್ತನೆಯಾದ ನಂತರ ಕಟಾವಿಗೆ ಮೊದಲು ಸಾಮಾನ್ಯ ಇಳುವರಿಗಿಂತ ಶೇ.50ಕ್ಕಿಂತ ಹೆಚ್ಚಿನ ಬೆಳೆ ಹವಾಮಾನ ವೈಪರೀತ್ಯದಿಂದ ನಷ್ಟ ಸಂಭವಿಸಿದಲ್ಲಿ ಶೇ.25 ಮುಂಚಿತವಾಗಿ ಪರಿಹಾರ. ಬೆಳೆ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ – ಕಟಾವು ಮಾಡಿದ 14 ದಿನಗಳ ಒಳಗೆ ಮಳೆ ಮತ್ತು ಆಲಿಕಲ್ಲು ಮಳೆಯಿಂದ ನಷ್ಟ, 72 ಗಂಟೆಯೊಳಗೆ ವಿಮಾ ಸಂಸ್ಥೆಗೆ ಮಾಹಿತಿ ನೀಡಬೇಕಾಗಿರುತ್ತದೆ.
ಹೆಚ್ಚಿನ ವಿವರಗಳಿಗೆ ಹೋಬಳಿ ರೈತ ಸಂಪರ್ಕ ಕೇಂದ್ರ/ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮಂಗಳೂರು, ಸಹಾಯಕ ಕೃಷಿ ನಿರ್ದೇಶಕರು ದೂರವಾಣಿ ಸಂಖ್ಯೆ: 8277931071, ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕರು, ದೂರವಾಣಿ ಸಂಖ್ಯೆ: 8277931072, ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು, ದೂರವಾಣಿ ಸಂಖ್ಯೆ: 8277931066, ಪುತ್ತೂರು ಸಹಾಯಕ ಕೃಷಿ ನಿರ್ದೇಶಕರು, ದೂರವಾಣಿ ಸಂಖ್ಯೆ: 8277931079, ಸುಳ್ಯ ಸಹಾಯಕ ಕೃಷಿ ನಿರ್ದೇಶಕರು, ದೂರವಾಣಿ ಸಂಖ್ಯೆ: 8277931079, ಯುಎಸ್ಜಿಐಸಿ ವಿಮಾ ಸಂಸ್ಥೆ, ಸಂಜಯ ವತ್ಸ ಸಂಕೇತ್, ದೂರವಾಣಿ ಸಂಖ್ಯೆ: 7400446265, 7353814580 ರವರನ್ನು ಸಂಪರ್ಕಿಸಲು ಮಂಗಳೂರು ಜಂಟಿ ಕೃಷಿ ನಿರ್ದೇಶಕ ಪ್ರಕಟಣೆ ತಿಳಿಸಿದೆ.
ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಸಂದರ್ಶನ
ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಧೀನದಲ್ಲಿ ಬರುವ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸಲು ಶುಶ್ರೂಷಕಿ, ಲ್ಯಾಬ್ ಟೆಕ್ನೀಷನ್, ಫಾರ್ಮಸಿಸ್ಟ್ ಹುದ್ದೆಗಳನ್ನು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಲು ತಾತ್ಕಾಲಿಕವಾಗಿ 6 ತಿಂಗಳ ಮಟ್ಟಿಗೆ ನೇಮಕಕ್ಕೆ ಜುಲೈ 25 ರಂದು 11 ಗಂಟೆಗೆ ಮಂಗಳೂರಿನ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣ ನೇರ ಸಂದರ್ಶನ ನಡೆಯಲಿದೆ.
ಹುದ್ದೆ ವಿವರ ಇಂತಿವೆ;- 1) ಶುಶ್ರೂಷಕಿ – 3 ಹುದ್ದೆ, ವೇತನ – ರೂ. 25 ಸಾವಿರ, ವಿದ್ಯಾರ್ಹತೆ – ಡಿಪ್ಲೋಮ ಇನ್ ನರ್ಸಿಂಗ್ (ನರ್ಸಿಂಗ್ ಕೌನ್ಸಿಲ್ನಲ್ಲಿ ನೊಂದಣಿಯಾಗಬೇಕು), 2) ಪ್ರಯೋಗ ಶಾಲಾ ತಂತ್ರಜ್ಞರು – 21 ಹುದ್ದೆ, ವೇತನ – ರೂ. 20 ಸಾವಿರ, ವಿದ್ಯಾರ್ಹತೆ – ಡಿ.ಎಂ.ಎಲ್.ಟಿ ಕರ್ನಾಟಕ ಪ್ಯಾರ ಮೆಡಿಕಲ್ ಬೋರ್ಡ್ ಪ್ರಮಾಣ ಪತ್ರ, 3) ಫಾರ್ಮಸಿಸ್ಟ್ – 34 ವೇತನ – ರೂ. 20 ಸಾವಿರ, ವಿದ್ಯಾರ್ಹತೆ – ಡಿ.ಫಾವ್ರ್ಮ (ಫಾರ್ಮಸಿ ಕೌನ್ಸಿಲ್ಲ್ಲಿ ನೊಂದಣಿಯಾಗಬೇಕು).
ಸಲ್ಲಿಸಬೇಕಾದ ದಾಖಲೆಗಳು:- ವಿದ್ಯಾರ್ಹತೆಯ ಸಂಬಂಧಿಸಿದ ಎಲ್ಲಾ ಅಂಕಪಟ್ಟಿಗಳ ಮೂಲ ಪ್ರತಿ ಹಾಗೂ ಅವುಗಳ ಸ್ವಯಂ ದೃಡೀಕೃತ ನಕಲು ಪ್ರತಿಗಳು, ಅನುಭವಕ್ಕೆ ಆದ್ಯತೆ ನೀಡಲಾಗುವುದು ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಹಾಜರಾಗುವುದು.
ಹೆಚ್ಚಿನ ಮಾಹಿತಿಗೆ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಅಥವಾ ದೂರವಾಣಿ ಸಂಖ್ಯೆ; 0824-2423672 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಜು. 28 – ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ
ಕೇಂದ್ರ ಪುರಸ್ಕøತ ಕಾರ್ಯಕ್ರಮಗಳ ಅನುಷ್ಟಾನ ಬಗ್ಗೆ ಪರಿಶೀಲನೆ ನಡೆಸುವ ಸಲುವಾಗಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಜುಲೈ 28 ರಂದು ಪೂರ್ವಾಹ್ನ 10.30 ಗಂಟೆಯಿಂದ ದ.ಕ. ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಂಭಾಗಣದಲ್ಲಿ ನಡೆಯಲಿದೆ.
ಕೃಷಿ ವಿಜ್ಞಾನಿಗಳಿಂದ ರೈತರ ಗದ್ದೆಗಳಿಗೆ ಭೇಟಿ
ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಕೀಟ ಹಾಗೂ ರೋಗಗಳ ನಿರ್ವಹಣೆಯ ಬಗ್ಗೆ ರೈತರಿಗೆ ಮಾಹಿತಿ ನೀಡಲು ಕೃಷಿ ವಿಜ್ಞಾನಿ ಮತ್ತು ಅಧಿಕಾರಿಗಳ ತಂಡವು ರೈತರ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿತು.
ಕೃಷಿ ಇಲಾಖೆ, ಮಂಗಳೂರು ಇದರ 2020-21 ನೇ ಸಾಲಿನ ಆತ್ಮ ಯೋಜನೆಯಡಿಯಲ್ಲಿ ಕೃಷಿ ಇಲಾಖೆ, ಮಂಗಳೂರು 2020-21 ನೇ ಸಾಲಿನ ಆತ್ಮ ಯೋಜನೆಯಡಿಯಲ್ಲಿ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ. ಕೇದಾರನಾಥ್, ಡಾ. ರಶ್ಮಿ, ಡಾ. ಶೋಧನ್ ಹಾಗೂ ಮಂಗಳೂರು ಆತ್ಮ ಯೋಜನೆಯ ಉಪ ಯೋಜನಾ ನಿರ್ದೇಶಕರ ರಶ್ಮಿ, ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಬೆಳಾಲು ಹಾಗೂ ಕೊಕ್ರಾಡಿ ಗ್ರಾಮಕ್ಕೆ ವಿಜ್ಞಾನಿ ಮತ್ತು ವಿಸ್ತರಣಾಧಿಕಾರಿ ಜಂಟಿ ಕ್ಷೇತ್ರ ಭೇಟಿ ನೀಡಿದರು.
ಬೆಳಾಲು ಗ್ರಾಮದ ಪ್ರಗತಿಪರ ಕೃಷಿಕ ಸುಲೈಮಾನ್ ಭೀಮಂಡೆ ಇವರ, ಕೃಷಿ ಕ್ಷೇತ್ರಕ್ಕೆ ಭೇಟಿ ನೀಡಿ ಸಸ್ಯ ಸಂರಕ್ಷಣಾ ವಿಭಾಗದ ವಿಜ್ಞಾನಿ ಡಾ. ಕೇದಾರನಾಥ್ ಸೇರಿದ್ದ ರೈತರಿಗೆ ಭತ್ತದಲ್ಲಿ ಕೀಟ ಹಾಗೂ ರೋಗಗಳ ನಿರ್ವಹಣೆಯಲ್ಲಿ ಅನಾವಶ್ಯಕ ಪೀಡೆನಾಶಕಗಳ ಹೆಚ್ಚಿನ ಬಳಕೆಯಿಂದ ಪರಿಸರ ಸ್ನೇಹಿ ಪರತಂತ್ರ ಮತ್ತು ಪರಭಕ್ಷಕ ಕೀಟಗಳ ನಾಶವಾಗುತ್ತದೆ ಹಾಗೂ ಕೀಟ ಮತ್ತು ರೋಗಕಾರಕಗಳ ಸಂಖ್ಯೆ ಉಲ್ಬಣಗೊಳ್ಳುತ್ತದೆ ಆದ್ದರಿಂದ ಜೈವಿಕ ನಿಯಂತ್ರಕಗಳಾದ ಟ್ರೈಕೋಡರ್ಮಾ ಹಾಗೂ ಸೂಡೋಮೊನಾಸ್ ಬಳಸುವುದು ಉತ್ತಮ ಎಂದು ಮಾಹಿತಿ ನೀಡಿದರು.
ಕೊಕ್ರಾಡಿ ಗ್ರಾಮದ ಪ್ರಗತಿಪರ ಕೃಷಿಕ ಸುಧಾಕರ ಜೈನ್ ಇವರ ಕೃಷಿ ಕ್ಷೇತ್ರಕ್ಕೆ ಭೇಟಿ ನೀಡಿ ಡಾ. ರಶ್ಮಿ, ತೋಟಗಾರಿಕಾ ವಿಜ್ಞಾನಿ ತೋಟಗಾರಿಕಾ ಬೆಳೆಗಳ ಪ್ರಾಮುಖ್ಯತೆ, ಅಡಿಕೆ ಹಾಗೂ ತೆಂಗಿನ ಬೆಳೆಯಲ್ಲಿ ಸಮಗ್ರ ಬೇಸಾಯ ಪದ್ಧತಿ ಹಾಗೂ ನಾಟಿ ಪೂರ್ವ ಹಾಗೂ ಬಳಿಕದ ಆರೈಕೆ ಬಗ್ಗೆ ಸೇರಿದ್ದ ರೈತರಿಗೆ ಮಾಹಿತಿ ನೀಡಿದರು.
ಮಂಗಳೂರಿನ ಪಶು ವೈದ್ಯ ಡಾ. ಶೋಧನ್ ಹೈನುಗಾರಿಕೆ ಹಾಗೂ ಕೋಳಿ ಸಾಕಾಣಿಕೆಯಲ್ಲಿ ರೈತರ ಸಮಸ್ಯೆಯನ್ನು ಆಲಿಸಿ ಮಾಹಿತಿಯನ್ನು ನೀಡಿದರು. ಸಹಾಯಕ ತೋಟಗಾರಿಕಾ ಅಧಿಕಾರಿ ಮಹಾವೀರ್ ಅವರು ಅಡಿಕೆ ಹಾಗೂ ತೆಂಗಿನಲ್ಲಿ ಕೆಂಪು ಮೂತಿ ಹುಳುವಿನ ಹಾನಿ, ಅದನ್ನು ಗುರುತಿಸುವಿಕೆ ಹಾಗೂ ಅದರ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು. ಸಸ್ಯ ಸಂರಕ್ಷಣಾ ವಿಭಾಗದ ವಿಜ್ಞಾನಿ ಡಾ. ಕೇದಾರನಾಥ್ ಕೆಂಪು ಮೂತಿ ಹುಳುವನ್ನು ನಿರ್ವಹಿಸುವ ಸಲುವಾಗಿ ಮೋಹಕ ಬಲೆಗಳ ಉಪಯೋಗ ಹಾಗೂ ಅವಶ್ಯಕ ಪೀಡೆನಾಶಕಗಳ ಮಿತ ಬಳಕೆ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆತ್ಮ ಯೋಜನೆ ಸಿಬ್ಬಂದಿಗಳಾದ ಶರಣ್ ಮತ್ತು ಚಂದ್ರಕಲಾ ಉಪಸ್ಥಿತರಿದ್ದರು ಎಂದು ಮಂಗಳೂರು ಉಪ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಮೊರಾರ್ಜಿ ದೇಸಾಯಿ ಪ.ಪೂ ವಸತಿ ಕಾಲೇಜು ವಿಜ್ಞಾನ ವಿಭಾಗ- ಶೇ. 100 ಫಲಿತಾಂಶ
ಮಂಗಳೂರಿನ ಮೆನ್ನಬೆಟ್ಟು ಗ್ರಾಮದ ಕಮ್ಮಾಜೆಯಲ್ಲಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆಯ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. 100 ಫಲಿತಾಂಶ ಬಂದಿದೆ.
ಪರೀಕ್ಷೆಗೆ ಹಾಜರಾದ 31 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, ಉಳಿದ 18 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಗೊಂಡಿದ್ದಾರೆ. ಸೌಜನ್ಯ 550, ಬಸವರಾಜ ಮತ್ತು ಯಶೋಧ 545 ಮತ್ತು ಪರಶುರಾಮ 535 ಅಂಕ ಗಳಿಸಿದ್ದಾರೆ. ಶೇ.100 ಫಲಿತಾಂಶಕ್ಕೆ ಕಾರಣರಾದ ಕಾಲೇಜು ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳನ್ನು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರು ಅಭಿನಂದಿಸಿದ್ದಾರೆ ಎಂದು ಕಮ್ಮಾಜೆ ಮೆನ್ನಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಶುಂಪಾಲ ಅವರ ಪ್ರಕಟಣೆ ತಿಳಿಸಿದೆ.
ರಂಗ ತರಬೇತಿ ಡಿಪ್ಲೊಮೊ ಕೋರ್ಸ್ -ದಿನಾಂಕ ವಿಸ್ತರಣೆ
ಮೈಸೂರು ರಂಗಾಯಣದ ಭಾರತೀಯ ರಂಗಶಿಕ್ಷಣ ಕೇಂದ್ರವು ನಡೆಸುವ ಒಂದು ವರ್ಷದ ರಂಗ ತರಬೇತಿ ಡಿಪ್ಲೊಮೊ ಕೋರ್ಸ್ನ ಅರ್ಜಿ ಪ್ರಕ್ರಿಯೆಗೆ ಕೊವೀಡ್ -19 ರ ಸಂದರ್ಭದಲ್ಲಿ ಉಂಟಾಗಿರುವ ಅಂಚೆ ಅನಾನುಕೂಲತೆ ಮತ್ತು ಕರ್ನಾಟಕದಾದ್ಯಂತ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 20 ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಎಲ್ಲಾ ವಿವರಗಳನ್ನು ರಂಗಾಯಣದ ವೆಬ್ಸೈಟ್ http://www.rangayana.org ನಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ರಂಗಾಯಣ, ಕಲಾಮಂದಿರ ಆವರಣ, ವಿನೋಬಾ ರಸ್ತೆ, ಮೈಸೂರು ದೂರವಾಣಿ ಸಂಖ್ಯೆ 0821 2512639, 2512629 ನ್ನು ಸಂಪರ್ಕಿಸಲು ಮೈಸೂರು ರಂಗಾಯಣ ಜಂಟಿ ನಿರ್ದೇಶಕರ ಪ್ರಕ ಟಣೆ ತಿಳಿಸಿದೆ.
ಮಹಿಳೆ ನಾಪತ್ತೆ
ಮಹಿಳೆ ನಾಪತ್ತೆಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮತಿ (38) ಎಂಬ ಮಹಿಳೆ, ಕೋಡಿಂಬಾಳದ ಬೀಡಿ ಬ್ರಾಂಚ್ಗೆ ಹೋಗಿ ಬರುತ್ತೇನೆಂದು ಹೋದವರು ವಾಪಸ್ಸು ಬಾರದೆ ಕಾಣೆಯಾಗಿದ್ದಾರೆ.
ಕಾಣೆಯಾದ ಮಹಿಳೆಯ ಚಹರೆ ಇಂತಿವೆ:- ಹೆಸರು-ಸುಮತಿ, ಪ್ರಾಯ-38 ವರ್ಷ, ಎತ್ತರ-5.2, ಶರೀರ-ಸಪೂರ ದೇಹ, ಗೋಧಿ ಮೈಬಣ್ಣ, ಕೋಲು ಮುಖ, ಕಪ್ಪು ತಲೆಕೂದಲು, ಧರಸಿದ ಬಟ್ಟೆ-ಕಂದು ಬಣ್ಣದ ಸಾರಿ ಮತ್ತು ರವಿಕೆ, ಮಾತನಾಡುವ ಭಾಷೆ-ತುಳು. ಕಾಣೆಯಾದ ಯುವತಿ ಬಗ್ಗೆ ಮಾಹಿತಿ ದೊರಕಿದ್ದಲ್ಲಿ ಕಡಬ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಯುವ ಸಂಘ, ಕ್ಲಬ್ ನೋಂದಣಿ – ಆನ್ಲೈನ್ ಅರ್ಜಿ ಆಹ್ವಾನ
ಕರ್ನಾಟಕ ಸರ್ಕಾರ ಇವರು ಸಕಾಲ ಅಧಿನಿಯಮದಡಿ ಇಲಾಖೆಯ ಯುವ ಸಂಘಗಳ ನೊಂದಣಿ ಸೇವೆಯನ್ನು ಸಕಾಲ ಸೇವೆಯನ್ನಾಗಿ ಈಗಾಗಲೇ ಆನ್ಲೈನ್ ಮೂಲಕ ನೀಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ತಮ್ಮ ಸಂಘಗಳನ್ನು ಕರ್ನಾಟಕ ಸಂಘ ಸಂಸ್ಥೆಗಳ ನೊಂದಾವಣೆ ಕಾಯಿದೆ 1960ರ ಅಡಿಯಲ್ಲಿ ನೊಂದಾಯಿಸಿಕೊಳ್ಳುವಂತೆ ತಿಳಿಸಿದೆ.
ಈ ಕಾಯಿದೆಯನ್ವಯ ನೊಂದಣಿಯಾದ ಸಂಘಗಳು ನೊಂದಣಿ ಪ್ರಮಾಣ ಪತ್ರ, ಕಾರ್ಯನಿರ್ವಾಹಕ ಸಮಿತಿ ಸದಸ್ಯರ ವಿವರ, ಸದಸ್ಯರ ಹೆಸರು ಮತ್ತು ವಯಸ್ಸಿನ ವಿವರ, ಹಿಂದಿನ ವರ್ಷದ ಸಭೆಯ ನಡವಳಿ ಪ್ರತಿ, ಹಿಂದಿನ ಹಣಕಾಸು ವರ್ಷದ ಲೆಕ್ಕ ಪರಿಶೋಧನಾ ವರದಿ ಇದೆಲ್ಲದರ ಮೇಲೆ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಸಹಿ ಮತ್ತು ಮೊಹರಿನ ಪ್ರತಿಯೊಂದಿಗೆ ಇಲಾಖಾ ಮಾನ್ಯತೆ ಪಡೆಯಲು SevaSindhu ಮೂಲಕ ಆನ್ಲೈನ್ನಲ್ಲಿ ಯುವ ಸಂಘಗಳ ನೊಂದಣಿಗೆ ಅವಕಾಶ ಕಲ್ಪಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಂಘಗಳು ಈ ಬಗ್ಗೆ ಗಮನಹರಿಸಿ ಕಾರ್ಯನಿರತವಾಗಿರಬೇಕು ಎಂದು ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಅನುಪಯುಕ್ತ ಸಾಮಾಗ್ರಿ – ಬಹಿರಂಗ ಹರಾಜು
ಜಂಟಿ ಕೃಷಿ ನಿರ್ದೇಶಕರು, ಮಂಗಳೂರು (ಲೋಕೋಪಯೋಗಿ ಕಟ್ಟಡ ಸಂಕೀರ್ಣ, 1ನೇ ಮಹಡಿ) ಕಚೇರಿಯಲ್ಲಿರುವ ಅನುಪಯುಕ್ತಗೊಂಡಿರುವ ಸಾಮಾಗ್ರಿಗಳನ್ನು ಆಗಸ್ಟ್ 1 ರಂದು ಮಧ್ಯಾಹ್ನ 12 ಗಂಟೆಗೆ ಬಹಿರಂಗ ಹರಾಜು ಮಾಡಲಾಗುತ್ತದೆ.
ಹರಾಜಿನಲ್ಲಿ ಭಾಗವಹಿಸುವ ಆಸಕ್ತರು ಸದರಿ ಕಚೇರಿಯಲ್ಲಿ ಹರಾಜು ಮಾಡಲಾಗುವ ಸಾಮಗ್ರಿಗಳನ್ನು ಜುಲೈ 31 ರೊಳಗೆ ಕಚೇರಿ ಸಮಯದಲ್ಲಿ ಪರಿಶೀಲಿಸಬಹುದು ಎಂದು ಮಂಗಳೂರು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ – ವಿವಿಧ ಸೌಲಭ್ಯ ಅರ್ಜಿ ಆಹ್ವಾನ
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ಮೂಲಕ 2020-21ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಕೆಳಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಲಿಚ್ಛಿಸುವ ಅರ್ಹ ಫಲಾನುಭವಿಗಳಿಂದ ನಿಗದಿತ ನಮೂನೆಯಲ್ಲಿ ಆನ್ಲೈನ್/ಆಫ್ಲೈನ್ (Online/Offline) ಮೂಲಕ ಅರ್ಜಿ ಆಹ್ವಾನಿಸಲಾಗಿದೆ
ಸರ್ಕಾರದ, ಯಾವುದಾದರೂ ನಿಗಮಗಳ ಯಾವುದಾದರು ಯೋಜನೆಯಡಿಯಲ್ಲಿ ಕುಟುಂಬದ ಯಾರೇ ಆಗಲಿ ಈಗಾಗಲೇ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.
ಬ್ಯಾಂಕ್ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ:- ಸ್ವಯಂ ಉದ್ಯೋಗ ಸಾಲ ಯೋಜನೆ, ಕಿರುಸಾಲ / ಸ್ವಸಹಾಯ ಗುಂಪುಗಳಿಗೆ ಸಹಾಯ ಧನ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಕೌಶಲ್ಯಾಭಿವೃದ್ಧಿ/ಉದ್ಯಮಶೀಲತಾ ತರಬೇತಿ. ಅರ್ಜಿಗಳನ್ನು ದಾಖಲಾತಿಗಳೊಂದಿಗೆ ನಿಗಮದ ವೆಬ್ಸೈಟ್ ಮೂಲಕ https://ambigaradevelopment.karnataka.gov.in ರಲ್ಲಿ ಆಗಸ್ಟ್ 12 ರಂದು 4.30 ಗಂಟೆಯೊಳಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸವವರು ಕೋಲಿ, ಗಂಗಾಮತ, ಬೆಸ್ತ, ಕಬ್ಬಲಿಗ, ಮೊಗವೀರ, ಅಂಬಿಗ/ಅಂಬಿ, ಬಾರ್ಕಿ/ಬಾರಿಕ, ಬೆಸ್ತರ್, ಭೋಯಿ, ರಾಜಬೋಯಿ, ಬುಂಡೆ-ಬೆಸ್ತರ್, ದಾಲ್ಚಿ, ದಾವತ್, ಗಬಿಟ್, ಗಲಾಡಕೊಂಕಣಿ, ಗಂಗೆಮಕ್ಕಳು, ಗಂಗಾಕುಲ, ಗಂಗಾಮತಸ್ಥ, ಗಂಗಾಪುತ್ರ, ಗೌರಿಮತ, ಬುಂಡೆ-ಬೆಸ್ತ/ಗುಂಡೆಬೆಸ್ತ, ಹರಕಂತ್ರ, ಜಲಗಾರ, ಕಬ್ಬೇರ/ಕಬ್ಬೇರ್, ಕಬ್ಬಿಲಿ, ಕಹರ್, ಖಾರ್ವಿ/ಕೊಂಕಣಖಾರ್ವಿ, ಕೋಳಿಮಹದೇವ್, ಮಡ್ಡರ್, ಮೀನಗಾರ್, ಮಗೇರ್, ಮುಕ್ಕವಾನ್, ಪರಿವಾರ, ಸಿವಿಯರ್, ಸುಣಗಾರ, ತೊರೆಯ, ಎಕೆ ಜಾತಿಗೆ ಜಾತಿಗೆ ಸೇರಿದವರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲೆಗಳಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಭವನ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ಅಥವಾ ನಿಗಮದ ವೆಬ್ಸೈಟ್ ನಲ್ಲಿ ಮಾಹಿತಿ ಪಡೆಯುವಂತೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
ಸಪೋಟ ಫಸಲು-ಬಹಿರಂಗ ಹರಾಜು
ಜುಲೈ 1 ರಿಂದ ಡಿಸೆಂಬರ್ 1 ರ ಅವಧಿಯ ಸಪೋಟ ಫಸಲನ್ನು ಆಗಸ್ಟ್ 5 ರಂದು ಬೆಳಿಗ್ಗೆ ತುಂಬೆ ತೋಟಗಾರಿಕೆ ಕ್ಷೇತ್ರ, ಬಂಟ್ವಾಳ, ಮಧ್ಯಾಹ್ನ ವಿಟ್ಲ ತೋಟಗಾರಿಕೆ ಕ್ಷೇತ್ರ ಹಾಗೂ ಆಗಸ್ಟ್ 6 ರಂದು ಬೆಳಿಗ್ಗೆ ಮದ್ದಡ್ಕ ತೋಟಗಾರಿಕೆ ಕ್ಷೇತ್ರ, ಬೆಳ್ತಂಗಡಿ ಸಪೋಟ ಫಸಲನ್ನು ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು.
ಆಸಕ್ತರು ಹರಾಜಿನಲ್ಲಿ ಭಾಗವಹಿಸಲು ಮತ್ತು ವಿಲೇವಾರಿ ಷರತ್ತುಗಳು ಹಾಗೂ ಹೆಚ್ಚಿನ ವಿವರಗಳಿಗೆ ರಾಜ್ಯ ವಲಯ ತೋಟಗಾರಿಕೆ ಇಲಾಖೆ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಮಂಗಳೂರು ದೂರವಾಣಿ ಸಂಖ್ಯೆ 0824 2444298 ನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.