ಆತೂರು(ವಿಶ್ವಕನ್ನಡಿಗ ನ್ಯೂಸ್): ಬದ್ರಿಯಾ ಜುಮಾ ಮಸೀದಿ ಆತೂರು ಹಾಗು ಎಸ್ ಕೆ ಎಸ್ ಎಸ್ ಎಫ್ ಆತೂರು ಇದರ ಜಂಟಿ ಆಶ್ರಯದಲ್ಲಿ ದಿನಾಂಕ 11-08-2020 ಮಂಗಳವಾರ ಭಾರತ ಹಾಗು ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ಅಭಿಯಾನವು ಬದ್ರಿಯಾ ಹಾಲ್ ಆತೂರುನಲ್ಲಿ ನಡೆಯಿತು.
ಆಯಷ್ಮಾನ್ ಕಾರ್ಡ್ ಅಭಿಯಾನಕ್ಕೆ ಸೈಯದ್ ಜುನೈದ್ ಜಿಪ್ರಿ ತಂಙಳ್ ದುಆಗೆ ಚಾಲನೆ ನೀಡಿದರು. ಬದ್ರಿಯಾ ಜುಮಾ ಮಸೀದಿ ಆತೂರು ಇದರ ಅಧ್ಯಕ್ಷರಾದ ಬಿ.ಕೆ ಅಬ್ದುಲ್ ರಝಾಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಆತೂರು ರೇಂಜ್ ಇದರ ಪ್ರದಾನ ಕಾರ್ಯದರ್ಶಿ ಕೆ ಎಮ್ ಸಿದ್ದೀಕ್ ಫೈಝಿ ಕರಾಯ, ಬದ್ರಿಯಾ ಜುಮಾ ಮಸೀದಿ ಆತೂರು ಇದರ ಕಾರ್ಯದರ್ಶಿ ಸಿರಾಜಿ ಬಡ್ಡಮೆ, ಬದ್ರಿಯಾ ಸ್ಕೂಲ್ ಮದರಸದ ಸದರ್ ಉಸ್ತಾದ್ ಹಂಝ ಸಖಾಫಿ, SKSSF ಆತೂರು ಶಾಖೆ ಅಧ್ಯಕ್ಷರಾದ ಬಿ.ರ್ ಅಬ್ದುಲ್ ಖಾದರ್, ಕಾರ್ಯದರ್ಶಿ ಸಿದ್ದೀಕ್ ನೀರಾಜೆ, ಆಡಳಿತ ಸಮಿತಿಯ ಸದಸ್ಯರು ಹಾಗು SKSSF ನ ಕಾರ್ಯಕರ್ತರು ಉಪಸ್ಥಿತರಿದ್ದರು. ಅಯುಷ್ಮಾನ್ ಕಾರ್ಡ್ ನು ಜಿ ಎಮ್ & ಶಾಹ ಸೈಬರ್ ತಂಡದವರು ಮಾಡಿ ಕೊಟ್ಟರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.