ರಿಯಾದ್(www.vknews.in): : ದೇಶದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಇಂಡಿಯನ್ ಸೋಶಿಯಲ್ ಫೋರಮ್ ಕರ್ನಾಟಕ ರಾಜ್ಯ ಚಾಪ್ಟರ್ ಸೌದಿ ಅರೇಬಿಯಾದ ವಿವಿಧ ಪ್ರಾಂತ್ಯಗಳಲ್ಲಿ ವೆಬಿನಾರ್ ನಲ್ಲಿ ಕಾರ್ಯಕ್ರಮ ಆಯೋಜಿಸುವ ಮೂಲಕ ಆಚರಿಸಲಾಯಿತು. ಜಿದ್ದಾ :ಇಂಡಿಯನ್ ಸೋಶಿಯಲ್ ಫೋರಮ್ ಜಿದ್ದಾ ಪ್ರಾಂತ್ಯ ಆಯೋಜಿಸಿದ ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕ ಹಾಗು ಪತ್ರಕರ್ತ ಹರ್ಷ ಕುಮಾರ್ ಕುಗ್ವೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸ್ವಾತಂತ್ರ್ಯದ ಸಂದೇಶ ನೀಡುವುದರ ಜತೆಗೆ ಪ್ರಸಕ್ತ ರಾಜಕೀಯ ಮತ್ತು ಸ್ವಾತಂತ್ರ್ಯ ಎಂಬ ವಿಷಯದಲ್ಲಿ ವಿಚಾರ ಮಂಡಿಸಿದರು,ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐ ಎಸ್ ಎಫ್ ಜಿದ್ದಾ ಅಧ್ಯಕ್ಷ ಕಲಂದರ್ ಸೂರಿಂಜೆ ವಹಿಸಿ,ಕಾರ್ಯದರ್ಶಿ ರಫೀಕ್ ಬಿಜೈ ನಿರೂಪಿಸಿದರು.
ದಮ್ಮಾಮ್: ಇಂಡಿಯನ್ ಸೋಶಿಯಲ್ ಫೋರಮ್ ದಮ್ಮಾಮ್ ಪ್ರಾಂತ್ಯ ಆಯೋಜಿಸಿದ ವೆಬಿನಾರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ರೌದಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಅಭಿಜಿತ್ ವರ್ಗಿಸ್ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು.ಅದಲ್ಲದೆ ಮಕ್ಕಳ ಛದ್ಮ ವೇಷ ಸ್ಪರ್ಧೆ ನಡೆಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆ ದಮ್ಮಾಮ್ ಐ ಎಸ್ ಎಫ್ ಅಧ್ಯಕ್ಷರಾದ ಷರೀಫ್ ಜೋಕಟ್ಟೆ ವಹಿಸಿದರು. ರಿಯಾದ್: ಇಂಡಿಯನ್ ಸೋಶಿಯಲ್ ಫೋರಮ್ ರಿಯಾದ್ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವೆಬಿನಾರ್ ನಲ್ಲಿ ಕಾರ್ಯಕ್ರಮ ಆಯೋಜಿಸುವ ಮೂಲಕ ಆಚರಿಸಲಾಯಿತು,ಕಾರ್ಯಕ್ರಮದ ಉದ್ಘಾಟನೆಯನ್ನು ಮುಹಮ್ಮದ್ ಹಾರಿಸ್ (ಅಧ್ಯಕ್ಷರು ಐ ಎಸ್ ಎಫ್ ಕೇಂದ್ರೀಯ ಸಮಿತಿ ರಿಯಾದ್) ನಿರ್ವಹಿಸಿದರು ಮತ್ತು ತಾಜುದ್ದೀನ್ ಪುತ್ತೂರು(ಐ ಎಸ್ ಎಫ್ ರಾಜ್ಯಸಮಿತಿ ಸದಸ್ಯ) ರವರು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.ಐ ಎಸ್ ಎಫ್ ರಿಯಾದ್ ಪ್ರಾಂತ್ಯ ಅಧ್ಯಕ್ಷರಾದ ಸಾಬಿತ್ ಬಜ್ಪೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಜುಬೈಲ್: ನಮ್ಮ ದೇಶ ನಮ್ಮ ಹೆಮ್ಮೆ ಎಂಬ ಘೋಷ ವಾಕ್ಯದೊಂದಿಗೆ ಜುಬೈಲ್ ಇಂಡಿಯನ್ ಸೋಶಿಯಲ್ ಫೋರಮ್ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿತು,ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಮೈಸೂರು ಸ್ವಾತಂತ್ರ್ಯ ದಿನದ ಸಂದೇಶ ಮತ್ತು ಪ್ರಚಲಿತ ವಿದ್ಯಮಾನಗಳ ಕುರಿತು ಮಾತನಾಡಿದರು.ಅದಲ್ಲದೆ ಮಕ್ಕಳಿಗೆ ರಾಷ್ಟ್ರ ನಾಯಕರ ಛದ್ಮವೇಷ ಸ್ಪರ್ಧೆ ಮತ್ತು ದೇಶ ಭಕ್ತಿ ಗೀತಿಗಳನ್ನು ಏರ್ಪಡಿಸಲಾಗಿತ್ತು,ಇಂಡಿಯನ್ ಸೋಶಿಯಲ್ ಫೋರಮ್ ಜುಬೈಲ್ ಪ್ರಾಂತ್ಯ ಅಧ್ಯಕ್ಷರಾದ ಫಿರೋಜ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು.
ಅಸೀರ್ :ಸೌದಿ ಅರೇಬಿಯಾದ ಅಸೀರ್ ಪ್ರಾಂತ್ಯದ ಇಂಡಿಯನ್ ಸೋಶಿಯಲ್ ಫೋರಮ್ ವತಿಯಿಂದ 74ನೇ ಸ್ವಾತಂತ್ರ್ಯ ದಿನದಾಚರಣೆಯನ್ನು ವೆಬಿನಾರ್ ಮೂಲಕ ಆಚರಿಸಲಾಯಿತು,ಕಾರ್ಯಕ್ರಮ ವನ್ನು ಇಂಡಿಯಾ ಫ್ರೆಟರ್ನಿಟಿ ಫೋರಮ್ ಅಸೀರ್ ಅಧ್ಯಕ್ಷರಾದ ಇಕ್ಬಾಲ್ ಕಾವೂರು ಉದ್ಘಾಟಿಸಿದರು,ಅಬ್ದುಲ್ ಮಜೀದ್ ತಬೂಕ್ (ಐ ಎಸ್ ಎಫ್ ರಾಜ್ಯಸಮಿತಿ ಸದಸ್ಯರು ಜಿದ್ದಾ) ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ಭಾಷಣ ಮಾಡಿದರು,ಮತ್ತು ಇಂಡಿಯಾ ಫ್ರೆಟರ್ನಿಟಿ ಫೋರಮ್ ಜಿಝನ್ ಅಧ್ಯಕ್ಷರಾದ ಸಲೀಂ ಗುರುವಾಯನಕೆರೆ ಶುಭ ಹಾರೈಸಿದರು,ಅಸೀರ್ ಪ್ರಾಂತ್ಯ ಅಧ್ಯಕ್ಷರಾದ ಹನೀಫ್ ಮಂಜೇಶ್ವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.