ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಈಗಾಗಲೇ ರಾಜ್ಯ ಸರಕಾರ ಅಂತಿಮ ಸೆಮಿಸ್ಟರ್ ಹೊರತು ಪಡಿಸಿ ಬೇರೆಲ್ಲ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದಂತೆ ನಿರ್ದೇಶಿಸಿ ಆದೇಶ ಹೊರಡಿಸಿದ ಹೊರತಾಗಿಯೂ ಕೆ.ಎಸ್.ಎಲ್.ಯು ವಿಶ್ವವಿದ್ಯಾಲಯ ಪಠ್ಯಕ್ರಮ ಪೂರ್ಣವಾಗದೇ ಪರೀಕ್ಷೆ ನಡೆಸಲು ಹೊರಟಿದೆ. ಇದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ.
ಕೊರೊನಾ ಸೋಂಕಿನಿಂದಾಗಿ ಬೋಧನಾ ತರಗತಿಗಳು ನಡೆಯದೆ ಅರ್ಧದಷ್ಟೂ ಪಠ್ಯಕ್ರಮವೇ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ರಾಜ್ಯ ಕಾನೂನು ವಿಶ್ವ ವಿದ್ಯಾಲಯ ಕೈಬಿಟ್ಟು ವಿದ್ಯಾರ್ಥಿಗಳ ಹಿತ ಕಾಯಬೇಕೆಂದು ಈ ಮೂಲಕ ಎಸ್.ಐ.ಓ ಕರ್ನಾಟಕ ಆಗ್ರಹಿಸುತ್ತದೆ.
ಹೊರ ರಾಜ್ಯ ವಿದ್ಯಾರ್ಥಿಗಳು ಕೂಡ ಕೋವಿಡ್-19 ನಂತಹ ಅಪಾಯಕಾರಿ ಪರಿಸ್ಥಿತಿಯಲ್ಲಿ ಬಂದು ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಕೂಡ ಇಲ್ಲ. ಮತ್ತೊಂದು ಕಡೆ ಹಾಸ್ಟೆಲ್ ಗಳನ್ನು ಕೋವಿಡ್ – 19 ವ್ಯವಸ್ಥೆಗೆ ಬಳಸುತ್ತಿರುವುದರಿಂದ ಅವರು ಬಂದು ಉಳಿದು ಕೊಳ್ಳುವುದು ಎಲ್ಲಿ ಎಂಬ ಪ್ರಶ್ನೆ ಉದ್ಬವವಾಗಿದೆ. ಆದರೆ ವಿಶ್ವವಿದ್ಯಾಲಯ ಇದ್ಯಾವುದರ ಬಗ್ಗೆ ಚಿಂತಿಸದೆ ಬೇಜಾಬ್ದಾರಿಯಿಂದ ಪರೀಕ್ಷಾ ದಿನಾಂಕ ಪ್ರಕಟಿಸಿ ಹಾಜರಾಗಿ ಎಂದಿರುವುದು ಖಂಡನಾರ್ಹ
ಇನ್ನು ಕೊರೊನಾ ಸೋಂಕಿನಿಂದಾಗಿ ದೂರದ ಸ್ಥಳಗಳಿಗೆ ಪ್ರಯಾಣಿಸುವುದು ಸೂಕ್ತವಲ್ಲದ ಕಾರಣ ಕಾನೂನು ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳು ಅವರಿಗೆ ಅನುಕೂಲಕರವಾದ ಪರೀಕ್ಷಾ ಕೇಂದ್ರಗಳಲ್ಲಿಯೇ ಪರೀಕ್ಷೆಗೆ ಹಾಜರಾಗಲು ಕಾನೂನು ವಿಶ್ವವಿದ್ಯಾಲಯ ಅವಕಾಶ ನೀಡಬೇಕು.
ವಿದ್ಯಾರ್ಥಿಗಳ ಜೀವನಕ್ಕಿಂತ ಪರೀಕ್ಷೆ ದೊಡ್ಡದಲ್ಲ. ಪರೀಕ್ಷೆ ನಡೆಸುವ ಮುನ್ನ ವಿದ್ಯಾರ್ಥಿಗಳಿಗೆ ಸೂಕ್ತವಾದ ವ್ಯವಸ್ಥೆ ಕಲ್ಪಿಸಬೇಕು. ಈಗಾಗಲೇ ಯುಜಿಸಿ ಕೂಡ ಈ ಹಿನ್ನಲೆಯಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಹೊರ ತಂದಿದೆ. ಆದರೆ ಕೆ.ಎಸ್.ಎಲ್.ಯು ಈ ಎಲ್ಲ ಆದೇಶ ಗಾಳಿಗೆ ತೂರಿ ಪರೀಕ್ಷೆ ನಡೆಸಲು ಹೊರಟಿರುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಈ ಕೂಡಲೇ ಆದೇಶ ಹಿಂಪಡೆಯುವಂತೆ ಎಸ್.ಐ.ಓ ಕರ್ನಾಟಕ ಆಗ್ರಹಿಸುತ್ತದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.