ಕೊಕ್ಕಡ(ವಿಶ್ವಕನ್ನಡಿಗ ನ್ಯೂಸ್): ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾವು ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಯನ್ನು ಪರಿಸರದ ಅರ್ಹ ಮುನ್ನೂರಕ್ಕಿಂತಲೂ ಹೆಚ್ಚಿನ ಫಲಾನುಭವಿಗಳಿಗೆ ನೀಡುವ ಮೂಲಕ ಸಾಮಾಜಿಕ ಕಾರ್ಯ ಮೆರೆದಿದೆ.
ಈ ಸಂದರ್ಭದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕೊಕ್ಕಡ ಗ್ರಾಮ ಸಮಿತಿ ಕಾರ್ಯದರ್ಶಿ ಝುಬೈರ್ ಕೊಕ್ಕಡ ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಯ ಕುರಿತು ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕೊಕ್ಕಡ ಗ್ರಾಮ ಸಮಿತಿ ಅಧ್ಯಕ್ಷರಾದ ಆಶೀಫ್ ಕೊಕ್ಕಡರವರು ಎಸ್ ಡಿ ಪಿ ಐ ಪಕ್ಷವು ದೇಶವ್ಯಾಪಿ ಸಾಮಾಜಿಕವಾಗಿ ಎಲ್ಲಾ ರಂಗಗಳಲ್ಲಿ ಮುಂಚೂಣಿಯಲ್ಲಿ ಸೇವೆ ಮಾಡುತ್ತಿದ್ದು, ಸರಕಾರದ ಎಲ್ಲಾ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಮತ್ತು ಮಾಹಿತಿಗಳನ್ನು ನೀಡುತ್ತಾ ಬಂದಿದೆ. ಇದರಿಂದಾಗಿ ಸಂಘಟನೆಯ ಮೇಲಿನ ಜನರ ನಿರೀಕ್ಷೆಗಳು ಮತ್ತಷ್ಟು ಬಲಗೊಂಡಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ದುಬೈ ಗೈಸ್ ಇದರ ಅಡ್ಮಿನ್ ರಝಕ್ ಕೊಕ್ಕಡ ಸಂದರ್ಭೋಚಿತವಾಗಿ ಮಾತನಾಡಿದರು. ಇಸ್ಮಾಯಿಲ್ ಮತ್ತು ರಾಜಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಅನ್ಸಾರ್ ಕೊಕ್ಕಡ ನಿರೂಪಿಸಿ ಧನ್ಯವಾದಗೈದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.