ಕಲ್ಲಡ್ಕ ಕೆ.ಸಿ ರೋಡ್ (ವಿಶ್ವ ಕನ್ನಡಿಗ ನ್ಯೂಸ್): ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI)-ಕೆ.ಸಿ ರೋಡ್ ವಲಯ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಆಯುಷ್ಮಾನ್ ಆರೋಗ್ಯ ಕಾರ್ಡ್” ನೋಂದಣಿ ಅಭಿಯಾನ ಕಾರ್ಯಕ್ರಮವು ಕಲ್ಲಡ್ಕ ಕೆ.ಸಿ ರೋಡಿನಲ್ಲಿ ಬಹಳ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಲ್ಲಡ್ಕ ಡಿವಿಜನ್ ಅಧ್ಯಕ್ಷರಾದ ಜನಾಬ್ ಸಿದ್ದೀಕ್ ಪನಾಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ SDPI ಕೆ.ಸಿ ರೋಡ್ ವಲಯ ಅಧ್ಯಕ್ಷರಾದ ಜನಾಬ್ ಇಕ್ಬಾಲ್ ಕೆ.ಸಿ ರೋಡ್ ರವರು ಅಧ್ಯಕ್ಷತೆ ವಹಿಸಿದರು ಹಾಗೂ ಮುಖ್ಯ ಅತಿಥಿಯಾಗಿ ಆಗಮಿಸಿದ SDPI ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾಗಿರುವ ಜನಾಬ್ ಯೂಸುಫ್ ಆಲಡ್ಕ ರವರು ಪ್ರಾಸ್ತಾವಿಕ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕೆ.ಸಿ ರೋಡ್ ವಲಯದ ಎಲ್ಲಾ ಪಧಾಧಿಕಾರಿಗಳು ಮತ್ತು ಸರ್ವ ಸದಸ್ಯರು ನಾಡಿನ ಸರ್ವ ನಾಗರಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.ಈ ಕಾರ್ಯಕ್ರಮದಲ್ಲಿ ಮುನ್ನೂರಕ್ಕಿಂತಲೂ ಅಧಿಕ ಫಲಾನುಭವಿಗಳು ಸದುಪಯೋಗ ಪಡೆದಿದ್ದು ಕಾರ್ಯಕ್ರಮ ಯಶಸ್ವಿಗೊಂಡಿತು.
ವರದಿ: ಕೆ.ಕೆ.ಜಬ್ಬಾರ್ ಕಲ್ಲಡ್ಕ
ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.