ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ವಿಶ್ವದಾದ್ಯಂತ ನೆಲೆಸಿರುವ ಸಮಸ್ತ ಕನ್ನಡಿಗರ ಆತ್ಮೀಯರಾಗಿದ್ದ ಶ್ರೀ ಬಿ. ಜಿ. ಮೋಹನ್ ದಾಸ್ ಆಗಸ್ಟ್ 31ನೇ ತಾರೀಕು ಈ ದಿನ ಮಧ್ಯಾಹ್ನ 1.45 ಕ್ಕೆ ತಮ್ಮ 70ನೇ ವಯಸ್ಸಿನಲ್ಲಿ ಇಹಲೋಕವನ್ನು ತ್ಯಜಿಸಿದ್ದಾರೆ.
ಮಣಿಪಾಲ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಚಿಕಿತ್ಸೆಯಲ್ಲಿ ಐ. ಸಿ. ಯು. ನಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದ ಬೀಜಿಯವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಪತ್ನಿ, ಮಗ, ಸೊಸೆ, ಮಗಳು ಮತ್ತು ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿರುವ ಮಹಾ ಚೇತನಕ್ಕೆ ಪರಮಾತ್ಮನು ಚಿರಶಾಂತಿ ಕರುಣಿಸಲಿ ಎಂದು ನಮ್ಮೆಲ್ಲರ ಪ್ರಾರ್ಥನೆಗಳು.
ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸೋಣ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.