ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಕೊರೋನ ವೈರಸ್ ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿದ್ದು, ಒಂದೇ ದಿನ ರಾಜ್ಯದಲ್ಲಿ 9746 ಮಂದಿಗೆ ಸೋಂಕು ತಗುಲಿರುವುದಾಗಿ ವರದಿಯಾಗಿದೆ.
ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುವುದರ ಜೊತೆಗೆ ಸಾವಿನ ಸಂಖ್ಯೆಯಲ್ಲೂ ಭಾರೀ ಹೆಚ್ಚಳ ಕಾಣುತ್ತಿದ್ದು ರಾಜ್ಯದಲ್ಲಿಂದು 128 ಜನರು ಬಲಿಯಾಗಿದ್ದಾರೆ. ಈವರೆಗೆ 383298 ಮಂದಿಗೆ ಸೋಂಕು ತಗುಲಿದ್ದು, 283298 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ದ.ಕ ಜಿಲ್ಲೆಯಲ್ಲಿ ಇಂದು 377 ಮಂದಿಗೆ ಸೋಂಕು ತಗುಲಿದ್ದು, 9 ಜನರು ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14600 ಕ್ಕೆ ತಲುಪಿದೆ. 11239 ಮಂದಿ ಚೇತರಿಸಿಕೊಂಡಿದ್ದಾರೆ. 400 ಮಂದು ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.