ಬಂಟ್ವಾಳ(ವಿಶ್ವಕನ್ನಡಿಗ ನ್ಯೂಸ್): ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಾಂಡವರಕಲ್ಲು ವತಿಯಿಂದ ಪಕ್ಷದ ಕಾರ್ಯಕರ್ತರ ಸಮ್ಮಿಲನ ಮತ್ತು ಪಕ್ಷಕ್ಕೆ ಹೊಸಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ ಇಂದು ಪಾಂಡವರಕಲ್ಲುವಿನ ಸಮುದಾಯ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಯೂಸುಫ್ ಆಲಡ್ಕ ವಹಿಸಿದ್ದರು.
ಎಸ್ ಡಿ ಪಿ ಐ ರಾಷ್ಟ್ರೀಯ ಕಾರ್ಯದರ್ಶಿಗಳಾದ ಆಲ್ಫೋನ್ಸ್ ಫ್ರಾಂಕೋ, ದ ಕ ಜಿಲ್ಲಾ ಕಾರ್ಯದರ್ಶಿಗಳಾದ ಇಕ್ಬಾಲ್ ಬೆಲ್ಲಾರೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸುಮಾರು 30-35 ರಷ್ಟು ಹೊಸ ಕಾರ್ಯಕರ್ತರು ಪಕ್ಷದ ಸಿದ್ಧಾಂತವನ್ನು ಒಪ್ಪಿ ಸದಸ್ಯತ್ವವನ್ನು ಸ್ವೀಕರಿಸಿದರು.
ದೇಶಭಕ್ತಿ ಗೀತೆಯಾದ ‘ಸಾರೆ ಜಹಾಂಸೆ ಅಚ್ಛಾ’ ಹಾಡುವ ಮೂಲಕ ಕಾರ್ಯಕ್ರಮವು ಆರಂಭಗೊಂಡು, ರಾಷ್ಟ್ರಗೀತೆಯ ಮೂಲಕ ಕಾರ್ಯಕ್ರಮವು ಕೊನೆಗೊಂಡಿತು.
ವೇದಿಕೆಯಲ್ಲಿ ಎಸ್ ಡಿ ಪಿ ಐ ಬಂಟ್ಬಾಳ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷರಾದ ಉಬೈದುಲ್ಲಾ, ಸಮಿತಿ ಸದಸ್ಯರಾದ ಪೈಝಲ್ ಮಂಚಿ ಮತ್ತು ಇತರ ನಾಯಕರು,ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಎಸ್ ಡಿ ಪಿ ಐ ಪಾಂಡವರಕಲ್ಲು ವಲಯಾಧ್ಯಕ್ಷರಾದ ಅಥಾವುಲ್ಲಾ ಕೆದಿಲೆ ಸ್ವಾಗತಿಸಿದರು. ಇಮ್ರಾನ್ ಪಾಂಡವರಕಲ್ಲು ನಿರೂಪಿಸಿ ,ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.