ಒಮಾನ್(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ಅಂತಾರಾಷ್ಟ್ರೀಯ ಸಮಿತಿ ವತಿಯಿಂದ “Resurgence-20″ ಕಾರ್ಯಕ್ರಮವು ಸೆ.18 ರಂದು Zoom App ನಲ್ಲಿ ನಡೆಯಲಿದೆ.
ಭಾರತೀಯ ಕಾಲಮಾನ ರಾತ್ರಿ 9.30ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕೇರಳ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಬದ್ರುಸ್ಸಾದಾತ್ ಅಸ್ಸಯ್ಯಿದ್ ಇಬ್ರಾಹೀಮುಲ್ ಖಲೀಲ್ ಅಲ್-ಬುಖಾರಿ ತಂಙಳ್ ರವರು ಉಪನ್ಯಾಸ ನೀಡಲಿದ್ದಾರೆ.
ಕೊಡಗು ಜಿಲ್ಲಾ ಸಹಾಯಕ ಖಾಝಿಯವರಾದ ಬಹು| ಕೆ.ಎ.ಮಹ್ಮೂದ್ ಮುಸ್ಲಿಯಾರ್ ಎಡಪ್ಪಾಲ ಇವರ ದುಆದೊಂದಿಗೆ ಆರಂಭಗೊಳ್ಳಲಿರುವ ಕಾರ್ಯಕ್ರಮವನ್ನು ಕರ್ನಾಟಕ ಜಮ್ಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಬಹು| ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದರು ಉದ್ಘಾಟಿಸಲಿದ್ದಾರೆ.
ಕೋವಿಡ್ ಕಾಲದಲ್ಲಿ ಹಲವರ ಕೆಲಸಗಳು ನಷ್ಟವಾಗಿದ್ದು, ಇನ್ನು ಕೆಲವರು ಆರ್ಥಿಕವಾಗಿ ಬಹುದೊಡ್ಡ ನಷ್ಟದಲ್ಲಿದ್ದಾರೆ. ಈ ಸಂದಿಗ್ಧ ಪರಿಸ್ಥಿತಿಯನ್ನು ನಿಭಾಯಿಸಲು ಉಲಮಾ ನಾಯಕರ ಸಲಹೆಗಳು ಬಹಳಷ್ಟು ಉಪಕಾರಿಯಾಗಲಿದೆ.
ಧಾರ್ಮಿಕ ನೈತಿಕತೆ ಹಾಗೂ ಆಧ್ಯಾತ್ಮಿಕ ಮರೀಚಿಕೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಸ್ವಸ್ಥ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆದ್ದರಿಂದ ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಕಾರ್ಯಕ್ರಮದ ಕನ್ವೀನರ್ ರಹೀಮ್ ಸಅದಿ ಖತರ್ ಹಾಗೂ ಇಕ್ಬಾಲ್ ಬರಕ ಒಮಾನ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.