ಅರಂತೋಡು(ವಿಶ್ವಕನ್ನಡಿಗ ನ್ಯೂಸ್): ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಅರಂತೋಡು ಇದರ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಸುಬ್ರಹ್ಮಣ್ಯ ಕುಮಾರ ಸ್ವಾಮಿ ಆಂಗ್ಲ ಮಾದ್ಯಮ ಪ್ರೌಡ ಶಾಲೆಯ ವಿದ್ಯಾರ್ಥಿ ಎ.ಎಲ್ ಅನುಷ್ ಇವರನ್ನು ದಿನಾಂಕ 12.09.2020 ರಂದು ಅರಂತೋಡಿನಲ್ಲಿ ನಡೆದ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರಧಾನ ಮತ್ತು ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಕಾರ್ಯಧ್ಯಕ್ಷ ಸಲೀಮ್ ಅಹ್ಮದ್ ಅವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ಎಂ.ನಾರಾಯಣ ಸ್ವಾಮಿ , ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಾಹೀದ್ ತೆಕ್ಕಿಲ್ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಸುಳ್ಯ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಮಾದ್ಯಮಂ ಪತ್ರಿಕೆಯ ಮುಖ್ಯ ವರದಿಗಾರ ರವೀಂದ್ರನ್ ರಾವಣೇಶ್ವರಮ್ ,ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕೆ.ಆರ್.ಗಂಗಾಧರ್,ವರ್ತಕ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ,ಅರಂತೋಡು ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ ,ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ವಾಸುದೇವ ಕಟ್ಟೆಮನೆ,ತೆಕ್ಕಿಲ್ ಶಾಲಾ ಮುಖ್ಯೋಪಧ್ಯಾಯ ದಾಮೋಧರ್, ಪಠೇಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬದ್ರುದ್ದೀನ್ ಪಠೇಲ್, ಪ್ರತಿಷ್ಠಾನ ಕೋಶಾಧಿಕಾರಿ ಟಿ.ಎಂ.ಜಾವೇದ್ ತೆಕ್ಕಿಲ್,ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಟಿ.ಎಂ.ಶಾಝ್ ತೆಕ್ಕಿಲ್ ಮೊದಲಾದವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.