ಉಪ್ಪಿನಂಗಡಿ(www.knees.in): ಹಿರೇಬಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಮ್ಮಾರ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಐಸಿಡಿಎಸ್ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಬಾಲವಿಕಾಶ ಸಮಿತಿಯ ಅಧ್ಯಕ್ಷರಾದ ತೇಜಾವತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೋವಿಡ್-19 ಕೊರೋನಾದಿಂದಾಗಿ ನಾವು ಪುಟ್ಟ ಮಕ್ಕಳ ಅನುಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಆಚರಿಸುವಂತಹ ಪರಿಸ್ಥಿತಿ ಒದಗಿಬಂದಿದೆ, ಇಂತಹ ಸಂದರ್ಭಗಳಲ್ಲಿ ಮಕ್ಕಳು ಕೂಡಾ ನಮ್ಮ ಜೊತೆಗಿದ್ದರೆ ಬಹಳಷ್ಟು ಸಂತೋಷ ಪಡುತ್ತಿದ್ದರು ಖೇದ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೆಮ್ಮಾರ ಅಂಗನವಾಡಿ ಕೇಂದ್ರದ ಶಿಕ್ಷಕಿ ಸುಂದರಿ.ಕೆ ಮಾತನಾಡಿ ದೇಶಕ್ಕಾಗಿ ಮಹಾತ್ಮ ಗಾಂಧಿಯವರ ಕೊಡುಗೆಯ ಬಗ್ಗೆ ಸ್ಮರಿಸಿದರು, ಮತ್ತು ಅಂಗನವಾಡಿ ಕೇಂದ್ರದ ಮೂಲಕ ಗರ್ಭಿಣಿಯರು, ಬಾಣಂತಿಯರು, ಮತ್ತು ಮಕ್ಕಳಿಗೆ ಸಿಗುವ ಪೌಷ್ಟಿಕ ಆಹಾರದ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕೇಂದ್ರದ ಸುತ್ತಮುತ್ತ ಫಲ ಸಸ್ಯಗಳನ್ನು ನೆಡುವ ಮೂಲಕ ಹಾಗೂ ಗರ್ಭಿಣಿ ಸ್ತ್ರೀಯರಿಗೆ ಹೂ ಮುಡಿದು ಸಿಹಿ ಮತ್ತು ಹಣ್ಣುಹಂಪಲು ನೀಡಿ ಗೌರವಿಸಲಾಯಿತು, ಅದೇ ರೀತಿ ಅರ್ಹ ಫಲಾನುಭವಿಗಳಿಗೆ ಪೌಷ್ಟಿಕ ಆಹಾರ ಧಾನ್ಯಗಳನ್ನು ವಿತರಿಸಲಾಯಿತು. ಅಂಗನವಾಡಿ ಸಹಾಯಕಿಯರ ಸಹಕಾರದಿಂದ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ಸಾಗಿತ್ತು. ಈ ಸಂದರ್ಭದಲ್ಲಿ ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಅಝೀಜ್ ಬಿಕೆ, ಚೇತನಾ ಮತ್ತು ದೀಪಾ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಉದ್ಯಮಿ ಸೌಕತ್ ಜೇಡರಪೇಟೆ, ಸಾಮಾಜಿಕ ಚಿಂತಕ ಅಬ್ದುಲ್ ಗಫ್ಪಾರ್ ಕೆಮ್ಮಾರ, ಯಶೋಧ ನಾಗರಾಜ್ ಭಟ್ ಬಡಿಲ, ಬಾಶಿತ್ ಅಲಿ ಕೆಮ್ಮಾರ, ಅಂಗನವಾಡಿ ಮಕ್ಕಳ ಪೋಷಕರು, ಹಿರಿಯ ನಾಗರಿಕರಾದ ಮಹಮ್ಮದ್ ಜೇಡರಪೇಟೆ ಹೀಗೆ ಹಲವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.