ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನ ಸಿದ್ದಕಟ್ಟೆ ಸಮೀಪ ಬುಧವಾರ ಬೆಳಿಗ್ಗೆ ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕ ಇಲ್ಲಿನ ಮಂಚಕಲ್ಲು ನಿವಾಸಿ ಸೇಸಪ್ಪ ಗೌಡ ಅವರ ಪುತ್ರ ರಮಾನಂದ ಗೌಡ (30) ಅವರು ತಲೆಗೆ ಕಲ್ಲು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಂಗಬೆಟ್ಟು ಎಂಬಲ್ಲಿ ಮನೆ ಕಟ್ಟಡದ ಕಾಮಗಾರಿ ನಡೆಸುತ್ತಿದ್ದ ವೇಳೆ ಗೋಡೆ ಮೇಲಿನ ಕಲ್ಲು ಆಕಸ್ಮಿಕವಾಗಿ ಕೆಳಕ್ಕೆ ಬಿದ್ದಿದ್ದು, ಈ ಸಂದರ್ಭ ಅಡಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದ ರಮಾನಂದ ಗೌಡ ಅವರ ತಲೆಗೆ ಬಿದ್ದು ಗಂಭೀರ ಗಾಯಗೊಂಡ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿ ಪ್ರಸನ್ನ ನೇತೃತ್ವದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.