ಬೆಳ್ಳಾರೆ(ವಿಶ್ವಕನ್ನಡಿಗ ನ್ಯೂಸ್): ಝಖರಿಯ್ಯಾ ಜುಮಾ ಮಸ್ಜಿದ್ ಬೆಳ್ಳಾರೆಯಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ (ಸ.ಅ)ರವರ ಜನ್ಮ ದಿನಾಚರಣೆ ಯ ಅಂಗವಾಗಿ ಈದ್ ಮಿಲಾದ್ ಕಾರ್ಯಕ್ರಮ ನಡೆಯಿತು. ಮಸೀದಿಯ ಆಡಳಿತಾಧಿಕಾರಿ ಜನಾಬ್ ಮುಹಮ್ಮದ್ ರಾಫಿ ಯವರ ನಿರ್ಧೆಶನ ಪ್ರಕಾರ ಕೋವಿಡ್ ನಿಯಮಾನುಸಾರ ಸರಳವಾಗಿ ಆಚರಿಸಲಾಯಿತು.
ಸ್ಥಳೀಯ ಖತೀಬ್ ಬಹು ಯೂನುಸ್ ಸಖಾಫಿ ವಯನಾಡ್ ರವರ ನೇತ್ರತ್ವದಲ್ಲಿ ಕಾರ್ಯಕ್ರಮ ನಡೆಯಿತು. ಶ್ರೀಯುತರು ಪ್ರವಾದಿಯವರ ಜೀವನ ಕುರಿತು ಸಂದೇಶ ಭಾಷಣ ಮಾಡಿದರು. ಕಾರ್ಯಕ್ರಮ ದಲ್ಲಿ ದರ್ಶ್ ಹಾಗೂ ಮದ್ರಸಾ ಅಧ್ಯಾಪಕರು ಗಳು. ಜಮಾಅತರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.