ಮುದ್ದೇಬಿಹಾಳ(ವಿಶ್ವಕನ್ನಡಿಗ ನ್ಯೂಸ್): ತಾಲೂಕಿನ ಕೋಳೂರ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಆಹಾರ ಸರಬರಾಜು ನಿಗಮ ಅಧ್ಯಕ್ಷರು ಹಾಗೂ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಅವರು ಶನಿವಾರ ಚಾಲನೆ ನೀಡಿದರು.
ತಾಲೂಕಿನ ಕೋಳೂರ ಗ್ರಾಮದಲ್ಲಿಂದು ಕೃಷ್ಣಾ ಜಲ ನಿಗಮ ನಿಯಮಿತ ಅನುದಾನದಲ್ಲಿ ಸುಮಾರು 2.5 ಕೋಟಿ ರೂ ವೆಚ್ಚದಲ್ಲಿ ಭೂಮಿ ಪೂಜೆ ಮಾಡಿದರು. ಇದೇ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಸೋಮನಗೌಡ ಬಿರಾದಾರ, ಬಿಜೆಪಿ ಮುಖಂಡ ಮಲಕೇಂದ್ರಗೌಡ ಪಾಟೀಲ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಸಂಗಮೇಶ ಕತ್ತಿ, ತಾಳಿಕೋಟಿ ತಾ.ಪಂ ಅಧ್ಯಕ್ಷ ರಾಜುಗೌಡ ಬಿರಾದಾರ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.