ಹಳೆಯಂಗಡಿ(ವಿಶ್ವಕನ್ನಡಿಗ ನ್ಯೂಸ್): ಎಂಟು ವರ್ಷದ ಮಗು ಸೇರಿ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್ ಸಮೀಪ ನಡೆದಿದೆ.
ವಿನೋದ್ ಸಾಲಿಯಾನ್ 40 ರಚನಾ ಸಾಲಿಯನ್ 38 ಮತ್ತು ಅವರ ಪುತ್ರ ಸಾಧ್ಯ ಸಾಲಿಯನ್ 8ವರ್ಷದ ಬಾಲಕ ಸೇರಿ ದಂಪತಿಗಳು ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮೂಲತಃ ಹಳೆಯಂಗಡಿಯ ನಿವಾಸಿಯಾದ ವಿನೋದ್ ಸಾಲ್ಯಾನ್ ಕುಟುಂಬ, ಕಳೆದ ಹಳವಾರು ವರ್ಷಗಳಿಂದ ಮುಂಬೈಯಲ್ಲಿ ಹೋಟೆಲ್ ಉದ್ಯಮ ಮಾಡಿಕೊಂಡಿದ್ದು ಕಳೆದ ಒಂದು ವರ್ಷದ ಹಿಂದೆ ಊರಿಗೆ ಬಂದು ಹಳೆಯಂಗಡಿಯ ಕಲ್ಲಾಪು ರೈಲ್ವೇ ಗೇಟ್ ಬಳಿ ಬಾಡಿಗೆ ಮನೆ ಮಾಡಿಕೊಂಡಿದ್ದು ಊರಿನಲ್ಲಿ ರೀಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ.
ಶನಿವಾರ ಎಂದಿನಂತೆ ಇದ್ದ ದಂಪತಿಗಳು ಭಾನುವಾರ ದಿನ ಪೂರ್ತೀ ಮನೆಯ ಬಾಗಿಲು ತೆರೆಯದ ಕಾರಣ ಸಂಶಯಗೊಂಡ ಅಕ್ಕಪಕ್ಕದ ಮನೆಯವರು ಇಂದು ಬೆಳಿಗ್ಗೆ ಮನೆಯ ಕಿಟಕಿ ಬಾಗಿಲು ಮುರಿದು ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂತು
ಸ್ಥಳೀಯರ ಮಾಹಿತಿ ಮೇರೆಗೆ ತಕ್ಷಣ ಸ್ಥಳಕ್ಕೆ ಧಾವಿಸಿದ ಮುಲ್ಕಿ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣವೇನೆಂದು ಇನ್ನಷ್ಟೇ ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.