ಮಧುಗಿರಿ(ವಿಶ್ವಕನ್ನಡಿಗ ನ್ಯೂಸ್): ಸ್ನೇಹಿತನ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಲು ಬಂದ ವ್ಯಕ್ತಿ ಲಾರಿ ಮತ್ತ ದ್ವಿಚಕ್ರ ನಡುವೆ ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ವರದಿಯಾಗಿದೆ.
ಮಧುಗಿರಿ ತಾಲೂಕು ಕೊಡಿಗೇನಹಳ್ಳಿಯ ಫರೀದ್ ಮೃತಪಟ್ಟ ದುರ್ದೈವಿ. ಬೆಂಗಳೂರಿನ ಕೆ.ಆರ್ ಪುರಂನಲ್ಲಿ ಖಾಸಗಿ ಉದ್ಯೂಗಿ ಎನ್ನಲಾಗಿದೆ.
ಮಾಜಿ ಶಾಸಕ ಕೆ.ಎನ್ ರಾಜಣ್ಣ ನವರ ಕಟ್ಟಾ ಅಭಿಮಾನಿಯಾಗಿದ್ದ ಫರೀದ್ ಅಪಾರ ಸ್ನೇಹಿತರೊಂದಿಗೆ ಕಾಂಗ್ರೇಸ್ ಬೆಂಬಲಿತ ಅಭ್ಯಾರ್ಥಿ ಕೆ.ಎಂ ರಾಜೇಶ್ ಅವರ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಿ ಹಿಂತಿರುಗುವಾಗ ದೊಡ್ಡಡಬಳ್ಳಾಪುರ ಗುಂಡಂಗೆರೆ ಕ್ರಾಸ್ ಬಳಿ ಲಾರಿ ಮತ್ತ ದ್ವಿಚಕ್ರ ವಾಹನದ ನಡುವೆ ಅಪಘಾತಕ್ಕಡಾಗಿ ಮೃತಪಟ್ಟಿದ್ದಾನೆ.
ಮೃತನ ಅಂತ್ಯಕ್ರಿಯೆ ಇಂದು ಸ್ವಗ್ರಾಮದಲ್ಲಿ ಜರುಗಲಿದ್ದು. ಹಲವಾರು ಗಣ್ಯರು ಮೃತರ ಮನೆಗೆ ತೆರಳಿ ಸಾಂತ್ವನ ಹೇಳಿದ್ದಾರೆ. ಮೃತರ ಸಂಬಂಧಿಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.