ಬೆಂಗಳೂರು, (ವಿಶ್ವಕನ್ನಡಿಗ ನ್ಯೂಸ್) ಕರ್ನಾಟಕ ರಾಜ್ಯ ರೇಷ್ಮೆ ಉತ್ಪಾದನೆಯಲ್ಲಿ ಜಗತ್ತಿನಲ್ಲಿಯೇ ವಿಶ್ವವಿಖ್ಯಾತಿ ಪಡೆದಿದ್ದು, ಗುಣಮಟ್ಟದ ರೇಷ್ಮೆ ತಯಾರಿಕೆಯಲ್ಲಿ ಮಂಚೂಣಿಯಲ್ಲಿದೆ ಎಂದು ಕರ್ನಾಟಕ ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಸವಿತಾ ವಿ.ಅಮರಶೆಟ್ಟಿ ಹೇಳಿದರು.
ಬೆಂಗಳೂರಿನ ಕಬ್ಬನ್ಪೇಟೆಯಲ್ಲಿರುವ ನಿಗಮದ ಕಛೇರಿ, ಕೇಂದ್ರ ಉಗ್ರಾಣಕ್ಕೆ ದಿಡೀರ್ ಬೇಟಿ ನೀಡಿ, ಅಲ್ಲಿನ ಸಿಬ್ಬಂದಿ ಹಾಗೂ ರೇಷ್ಟೆ ವರ್ತಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಹಲವು ಕಷ್ಟ ಸಂಕಷ್ಟಗಳ ಮಧ್ಯಯು ರಾಜ್ಯದಲ್ಲಿ ಉತ್ತಮ ಗುಣಮಟ್ಟದ ರೇಷ್ಮೆ ಬೆಳೆಯಲಾಗುತ್ತಿದ್ದು, ರೇಷ್ಮೆ ಬೆಳೆಗಾರರಿಗೆ ಉತ್ತಮ ಮಾರುಕಟ್ಟೆ ಒದಗಿಸಲು ರೇಷ್ಮೆ ಮಾರಾಟ ಮಂಡಳಿ ಹಲವು ವಿನೂತನ ಯೋಜನೆ ಜಾರಿಗೆ ಮಾಡಲು ಚಿಂತನೆ ನಡೆಸುತ್ತಿದೆ ಎಂದರು.
ಉತ್ತಮ ಗುಣಮಟ್ಟದ ರೇಷ್ಮೆಗೆ ವ್ಯಾಪಕ ಬೇಡಿಕೆಯಿದ್ದು, ಈ ನಿಟ್ಟಿನಲ್ಲಿ ರೇಷ್ಮೆ ಬೆಳೆಗಾರರು ಗುಣಮಟ್ಟದ ರೇಷ್ಮೆ ಬೆಳೆಗೆ ಆಧ್ಯತೆ ನೀಡಿ ಬೆಳೆಗಾರರ ಆದಾಯವನ್ನು ದ್ವಿಗುಣಗೊಳಿಸುವ ಪ್ರಧಾನಿ ನರೇಂದ್ರ ಮೋದಿ ರವರ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರ ಕನಸು ನನಸಾಗಿಸುವತ್ತ ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ದಿಟ್ಟ ಹೆಜ್ಜೆ ಇಟ್ಟಿದೆ ಎಂದರು.
ಇದೇ ವೇಳೆಯಲ್ಲಿ ಅಲ್ಲಿನ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ ವರ್ಗದವರ ಹಾಜರಾತಿ ಪುಸ್ತಕವನ್ನು ಪರಿಶೀಲಿಸಿ, ನಿಗಮದ ಎಲ್ಲಾ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ ವರ್ಗದವರಿಗೆ ಸಮಯಕ್ಕೆ ಸರಿಯಾಗಿ ಕಛೇರಿಗಳಿಗೆ ಆಗಮಿಸಿ ಶಿಸ್ತಿನಿಂದ ಕರ್ತವ್ಯ ನಿರ್ವಹಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕೇಂದ್ರ ಉಗ್ರಾಣದಲ್ಲಿ ಶೇಖರಣೆ ಮಾಡಿರುವ ರೇಷ್ಮೆ ದಾಸ್ತಾನನ್ನು ತಾವೇ ಖುದ್ದು ಪರಿಶೀಲಿಸಿ, ಅಲ್ಲಿನ ಮಾರಾಟ ವಹಿವಾಟುಗಳ ವಿವರಗಳನ್ನು ಪಡೆದು ಮಾರುಕಟ್ಟೆ ದರದಲ್ಲಿ ರೇಷ್ಮೆಯನ್ನು ಮಾರಾಟ ಮಾಡುವ ಬಗ್ಗೆ ತಿಳಿಸಿದರು.
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.