ಚಿಕ್ಕಬಳ್ಳಾಪುರ,(ವಿಶ್ವಕನ್ನಡಿಗ ನ್ಯೂಸ್) ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಹಾಗೂ ರಾಜ್ಯ ರಾಜ್ಯ ಮಾವು ಅಭಿವೃಧ್ಧಿ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜ್ ಅವರ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಜಿಲ್ಲೆಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಚಿಕ್ಕಬಳ್ಳಾಪುರ ತಾಲೂಕಿನ ಕಣಜೇನಹಳ್ಳಿಯಲ್ಲಿ ರಾಜ್ಯ ಮಾವು ಅಭಿವೃಧ್ಧಿ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜ್ ಅವರಿಗೆ ಸನ್ಮಾನಿಸಿ ಕೇಕ್ ಕತ್ತರಿಸುವ ಮೂಲಕ ಅವರ ಹುಟ್ಟುಹಬ್ಬವನ್ನು ಆಚರಿಸಿದರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ ಜಿಲ್ಲೆಯ ಜನರು ತಮ್ಮ ಮೇಲೆ ಇಟ್ಟಿರುವ ಪ್ರೀತಿ ಅಭಿಮಾನಕ್ಕೆ ತಾವು ಸದಾ ಚಿರಋಣಿಯಾಗಿರುವುದಾಗಿ ಹೇಳಿ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ಸಹಕಾರದಿಂದ ರಾಜ್ಯ ಮಾವು ಅಭಿವೃಧ್ಧಿ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಭಾಗ್ಯ ಒದಗಿ ಬಂದಿದೆ ತಮ್ಮ ಅಧಿಕಾರಾವಧಿಯಲ್ಲಿ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆ ಸಹಿತ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೊಸ ತಳಿಯ ಮಾವುಗಳನ್ನು ಬೆಳೆಯಲು ರೈತರಿಗೆ ಅಗತ್ಯ ತರಬೇತಿ ಮತ್ತು ನೆರವು ಒದಗಿಸಲಾಗುವುದೆಂದರು.
ಈ ಸಂದಭರ್ದಲ್ಲಿ ಜಿಪಂ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಕೇಶವರೆಡ್ಡಿ, ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಡಿ.ಎಸ್.ಆನಂದ್ ರೆಡ್ಡಿ(ಬಾಬು), ನಗರಸಭೆಯ ಸದಸ್ಯರಾದ ನಾಗರಾಜ್, ಮಂಜುನಾಥಾಚಾರಿ,ಯತೀಶ್, ಮುಖಂಡರಾದ ಕೆವಿ ನವೀನ್ ಕಿರಣ್,ಮಹಾಕಾಳಿ ಬಾಬು ಮತ್ತಿತರರು ಉಪಸ್ಥಿತರಿದ್ದರು.
ವರದಿ:ತೆ.ಮೀಂ.ಅನ್ಸಾರಿ ಚಿಕ್ಕಬಳ್ಳಾಪುರ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.