ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಯ ವಿರುದ್ಧ, ದೆಹಲಿ ಸೇರಿದಂತೆ ದೇಶದಾದ್ಯಂತ ಸಾವಿರಾರು ರೈತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆಗೆ ಬೆಂಬಲವಾಗಿ ಕ್ಯಾಂಪಸ್ ಪ್ರಂಟ್ ಅಡ್ಕಾರ್ ಯುನಿಟ್ ವತಿಯಿಂದ ಪ್ಲೇ ಕಾರ್ಡ್ ಪ್ರದರ್ಶನ ಕಾರ್ಯಕ್ರಮವು ಅಡ್ಕಾರಿನಲ್ಲಿ ನಡೆಯಿತು.
ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯಾದ್ಯಂತ “ರೈತರೊಂದಿಗೆ ಜೊತೆಯಾಗೋಣ” ಎಂಬ ಅಭಿಯಾನ ನಡೆಸುತ್ತಿದ್ದು, ಇದರ ಭಾಗವಾಗಿ ಸುಳ್ಯದ ಅಡ್ಕಾರ್ ನಲ್ಲಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಸುಳ್ಯ ಏರಿಯಾಧ್ಯಕ್ಷರಾದ ಅರ್ಫೀದ್ ಅಡ್ಕಾರ್ ರವರು ‘ಕೇಂದ್ರ ಸರ್ಕಾರ ರೈತರೊಂದಿಗೆ ಯಾವುದೇ ರೀತಿಯ ಸಮಾಲೋಚನೆ ನಡೆಸದೆ, ಸುಗ್ರೀವಾಜ್ಞೆಯ ಮೂಲಕ ಕಾಯ್ದೆಯನ್ನು ಜಾರಿಗೆ ತಂದಿದ್ದು, ಇದು ದೇಶವನ್ನು ಬಂಡವಾಳಶಾಹಿಗಳಿಗೆ ಮಾರುವ ಸಂಘಪರಿವಾರದ ಅಜೆಂಡಾದ ಭಾಗವಾಗಿದೆ ಎಂದರು’. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಅಡ್ಕಾರ್ ಯುನಿಟ್ ಉಪಾಧ್ಯಕ್ಷ ಶಾಮಿಕ್, ಕಾರ್ಯದರ್ಶಿ ಝಿಯಾದ್ ಹಾಗೂ ಊರಿನ ಯುವಕರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.