ಕೊಣಾಜೆ(ವಿಶ್ವಕನ್ನಡಿಗ ನ್ಯೂಸ್): ನಾಟೆಕಲ್ ಸಮೀಪದ ನಡುಕುಮೇರ್ ಬಳಿ ಮರಳು ತುಂಬಿದ್ದ ಟಿಪ್ಪರ್ ಮತ್ತು ಓಮ್ನಿ ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮತ್ತು ಇನ್ನೊಬ್ಬ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಕಾರಿನಲ್ಲಿದ್ದ ಕೆ.ಸಿ ನಗರದ ಪೂಮಣ್ಣು ನಿವಾಸಿಗಳಾದ ಇಮ್ರಾನ್ (23) ಮತ್ತು ನೂರುದ್ದೀನ್ (22) ಗಾಯಗೊಂಡವರು ಎಂದು ಗುರುತಿಸಲಾಗಿದೆ.
ಕೇರಳ ನೋಂದಣಿಯ ಟಿಪ್ಪರ್ ಲಾರಿಯು ಮರಳನ್ನು ಹೊತ್ತುಕೊಂಡು ದೇರಳಕಟ್ಟೆಯ ಕಡೆಗೆ ಸಾಗುತ್ತಿದ್ದ ವೇಳೆ ನಾಟೆಕಲ್ ಕಡೆಯಿಂದ ಕೆ.ಸಿ ರೋಡ್ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಮುಖಾಮುಖಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.