ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಕೇಂದ್ರ ಸರಕಾರದ ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವ ಕ್ರಮ ವಿರೋಧಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಬಂಟ್ವಾಳ ತಾಲೂಕು ಸಮಿತಿ ನೇತೃತ್ವದಲ್ಲಿ ಶುಕ್ರವಾರ ಸಂಜೆ ಬಿ ಸಿ ರೋಡು ಜಂಕ್ಷನ್ನನಿನಲ್ಲಿ ಪ್ರತಿಭಟನೆ ನಡೆಯಿತು.
ಡಿವೈಎಫ್ಐ ಜಿಲ್ಲಾ ಮುಖಂಡರಾದ ಅಶ್ರಪ್ ಕೆ ಸಿ ರೋಡ್ ಮಾತನಾಡಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿಯುತ್ತಿದ್ದರೂ ಮೋದಿ ನೇತೃತ್ವದ ಕೇಂದ್ರ ಸರಕಾರ ಬೆಲೆಯನ್ನು ಏರಿಸುತ್ತಲೇ ಇದೆ. ಭಾರತದ ಮೂಲಕ ತೈಲ ತರಿಸಿಕೊಳ್ಳುತ್ತಿರುವ ಶ್ರೀಲಂಕಾ, ನೇಪಾಳದಲ್ಲಿ ಅಲ್ಲಿನ ಸರಕಾರ ಕಡಿಮೆ ಬೆಲೆಗೆ ಗ್ರಾಹಕರಿಗೆ ತೈಲ ಪೂರೈಸುತ್ತಿದೆ. ಆದರೆ ಇಲ್ಲಿ ಸರಕಾರ ತೈಲ ಬೆಲೆ ಏರಿಸಿ ಖಾಸಗಿ ಕಂಪೆನಿಗಳಿಗೆ ಲಾಭ ಮಾಡಿಕೊಡುತ್ತಿದೆ ಎಂದು ಆರೋಪಿಸಿದರು.
ಕಾರ್ಮಿಕ ಮುಖಂಡ ರಾಮಣ್ಣ ವಿಟ್ಲ, ಡಿವೈಎಫ್ಐ ತಾಲೂಕು ಸಮಿತಿ ಸಲಹೆಗಾರ ರಾಜ ಚೆಂಡ್ತಿಮಾರ್, ತಾಲೂಕು ಅಧ್ಯಕ್ಷ ಸುರೇಂದ್ರ ಕೋಟ್ಯಾನ್, ಕಾರ್ಯದರ್ಶಿ ನ್ಯಾಯವಾದಿ ತುಳಸೀದಾಸ್ ವಿಟ್ಲ, ಪ್ರಮುಖರಾದ ಸಯ್ಯದ್ ರಿಯಾಝ್, ಮಹಮ್ಮದ್ ಗಝಾಲಿ, ಮಹಮ್ಮದ್ ಇಕ್ಬಾಲ್ ಹಳೆಮನೆ, ನುಜುಮ್ ಅಳಿಕೆ, ಇಸಾಕ್ ಕುಡ್ತಮುಗೇರು, ಸುಲೈಮಾನ್ ಪೆಲತ್ತಡ್ಕ, ಸಮೀರ್ ಪಾತ್ರತೋಟ, ಶೆರೀಪ್ ಪಾತ್ರತೋಟ ಲಿಯಾಕತ್ ಖಾನ್, ಜನಾರ್ಧನ ಕುಲಾಲ್, ಖಲೀಲ್ ಬಾಪು, ಕೃಷ್ಣಪ್ಪ ಪುದ್ದೊಟ್ಟು, ಗುಣಕರ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.