ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನ ಬಾಳ್ತಿಲ ಗ್ರಾಮದ ಚೆರ್ಕಳ £ವಾಸಿ, ಶಂಭೂರು ಪ್ರೌಢಶಾಲಾ 9ನೇ ವಿದ್ಯಾರ್ಥಿ ಹರ್ಷಿತ್ (14) ಮನೆಯಲ್ಲಿ ಹೆತ್ತವರು ಬೈದರು ಎಂಬ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಜಾತ್ರೆಯಿಂದ ಬರುವಾಗ ತಡವಾಗಿದ್ದಲ್ಲದೆ, ತಂಗಿಗೆ ಐಸ್ ಕ್ರೀಂ ಕೂಡಾ ತಂದಿಲ್ಲ ಎಂಬುದಕ್ಕೆ ಮನೆಯಲ್ಲಿ ಹೆತ್ತವರು ಜೋರು ಮಾಡಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಮಾನಸಿಕವಾಗಿ ನೊಂದುಕೊಂಡು ಮನೆಯಲ್ಲಿ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.