ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನ ಕೊಡಾಜೆ ಸಮೀಪದ ಪಂತಡ್ಕ ನಿವಾಸಿ ನೀರಜ್ ಯಾನೆ ನೀಲು (30) ಎಂಬಾತ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾಯಿಯ ಸ್ಥಿತಿಗೆ ಮರುಗಿ, ಭಾವನಾತ್ಮಕ ಸಂದೇಶಗಳನ್ನು ವಾಟ್ಸಪ್ ಸ್ಟೇಟಸ್ಗೆ ಹಾಕಿ ಬಳಿಕ ಸೋಮವಾರ ರಾತ್ರಿ ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನೀರಜ್ ತಾಯಿ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದರಿಂದಲೇ ಮನನೊಂದಿರುವ ಈತ ತನ್ನ ಮೊಬೈಲ್ ವಾಟ್ಸಪ್ ಸ್ಟೇಟಸ್ನಲ್ಲಿ ಕೆಲವೊಂದು ಭಾವನಾತ್ಮಕ ಸಂದೇಶಗಳನ್ನು ಬರೆದುಕೊಂಡಿದ್ದಾನೆ. ಬಳಿಕ ನೇರವಾಗಿ ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳೀಯ ಈಜುಪಟು ಯುವಕರು ಹಾಗೂ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿಗಳು ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.