ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಪ್ರೆಂಡ್ಸ್ ಸರ್ಕಲ್ ಇದರ ಅದ್ಯಕ್ಷರಾಗಿ ಲತೀಫ್ ನೇರಳಕಟ್ಟೆ ಪುನರಾಯ್ಕೆಗೊಂಡಿದ್ದಾರೆ.
ಸಂಘದ ಅದ್ಯಕ್ಷ ಲತೀಫ್ ನೇರಳಕಟ್ಟೆ ಅವರ ಅದ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಂಘದ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ. ಉಪಾದ್ಯಕ್ಷರುಗಳಾಗಿ ಮಜೀದ್ ಮಾಣಿ, ರಝಾಕ್ ಸಾಹೇಬ್ ನೇರಳಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಪೆರಾಜೆ, ಕೋಶಾಧಿಕಾರಿಯಾಗಿ ರೋಹಿತಾಶ್ವ ಗಣೇಶನಗರ, ಜೊತೆ ಕಾರ್ಯದರ್ಶಿಗಳಾಗಿ ಝುಬೈರ್ ಪರ್ಲೊಟು, ಮು£ೀರ್ ಕೆಂಪುಗುಡ್ಡೆ, ಸಂಘಟನಾ ಕಾರ್ಯದರ್ಶಿಗಳಾಗಿ ಅತಾವುಲ್ಲಾ ನೇರಳಕಟ್ಟೆ, ಇಸ್ಮಾಯಿಲ್ ಅನಂತಾಡಿ, ಕ್ರೀಡಾ ಕಾರ್ಯದರ್ಶಿಗಳಾಗಿ ಮುಹಮ್ಮದ್ ಶಿಯಾಕ್, ಬದ್ರುದ್ದೀನ್ ನೇರಳಕಟ್ಟೆ ಅವರು ಆಯ್ಕೆಯಾದರು. ಹಾಗೂ 8 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನೇಮಿಸಲಾಯಿತು. ಲತೀಫ್ ನೇರಳಕಟ್ಟೆ ಸ್ವಾಗತಿಸಿ, ಚಂದ್ರಶೇಖರ ಪೆರಾಜೆ ವಂದಿಸಿದರು.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.