ಬೋಳಿಯಾರು(www.Vknews.in):ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೋಳಿಯಾರು ಘಟಕದ ವತಿಯಿಂದ ಪಾಪ್ಯುಲರ್ ಫ್ರಂಟ್ ದಿನಾಚರಣೆಯ ಅಂಗವಾಗಿ ರಂತಡ್ಕ ಕಛೇರಿ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿಟ್ಲ ಜಿಲ್ಲಾ ಸಮಿತಿ ಸದಸ್ಯರಾದ ರಹಿಮಾನ್ ಮಠರವರು ಕಾರ್ಯಕ್ರಮವನ್ನು ಉದ್ದೇಶಿಸಿ ದಿಕ್ಸೂಚಿ ಭಾಷಣ ಮಾಡಿದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೋಳಿಯಾರು ಘಟಕದ ಅಧ್ಯಕ್ಷರಾದ ಇಕ್ಬಾಲ್ ರಂತಡ್ಕರವರು ಧ್ವಜಾರೋಹಣ ಕಾರ್ಯಕ್ರಮ ನೆರೆವೆರಿಸಿದರು. ಈ ಸಂಧರ್ಭದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಂತಡ್ಕ ಘಟಕದ ಪ್ರಧಾನ ಕಾರ್ಯದರ್ಶಿ ಕಬೀರ್ ಹಾಗೂ ಕೊನಾಜೆ ಪೋಲಿಸ್ ಠಾಣಾಧಿಕಾರಿಗಳು ಉಪಸ್ಥಿತರಿದ್ದರು. ಧ್ವಜಾರೋಹಣದ ಬಳಿಕ ಕೇಂದ್ರ ಸರಕಾರದ ರೈತವಿರೋಧಿ ಹೋರಾಟದಲ್ಲಿ ಹುತಾತ್ಮರಾದ ರೈತರನ್ನು ನೆನಸುತ್ತಾ ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಇಮ್ರಾನ್ ರಂತಡ್ಕ ಸ್ವಾಗತಿಸಿದರು ಇರ್ಫಾನ್ ರಂತಡ್ಕ ನಿರೂಪಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಸಾರ್ವಾಜನಿಕರಿಗೆ ಸಿಹಿತಿಂಡಿ ಹಂಚಲಾಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.