ಕುಂದಾಪುರ,(ವಿಶ್ವ ಕನ್ನಡಿಗ ನ್ಯೂಸ್ ): ಬೆಂಗಳೂರಿನಿಂದ ಕುಂದಾಪುರಕ್ಕೆ ಬರುತ್ತಿದ್ದ ಕಾರಿನ ಟಯರ್ ಸ್ಪೋಟವಾಗಿ ನಡೆದ ಅಪಘಾತದಲ್ಲಿ ಕುಂದಾಪುರ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ.ಕುಂದಾಪುರದ ಉಳ್ತೂರಿನ ಪ್ರಕಾಶ್ ಶೆಟ್ಟಿ (43) ಸಾವನ್ನಪ್ಪಿದ ದುರ್ದೈವಿ ಎಂದು ಗುರುತಿಸಲಾಗಿದೆ.ಘಟನೆಯಲ್ಲಿ ಪ್ರಕಾಶ್ ಶೆಟ್ಟಿಯವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಮಕ್ಕಳಿಬ್ಬರೂ ಅಪಾಯದಿಂದ ಪಾರಾಗಿದ್ದಾರೆ.ಕುಂದಾಪುದದಲ್ಲಿ ನಡೆಯಲಿರುವ ಸೊಸೆಯ ಮದುವೆ ಸಮಾರಂಭಕ್ಕೆ ಕುಟುಂಬ ಸಮೇತರಾಗಿ ಆಗಮಿಸುವ ಸಂದರ್ಭದಲ್ಲಿ ಘಟನೆ ಸಂಭವಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.