ಅಬುಧಾಬಿ (www.vknews.com) : ಕೋವಿಡ್ ಕಾರಣ ಭಾರತದಿಂದ ನೇರವಾಗಿ ಸೌದಿ ಅರೇಬಿಯಾ ಮತ್ತು ಕುವೈತ್ ದೇಶಗಳಿಗೆ ಪ್ರಯಾಣ ಬೆಳೆಸಲು ನಿರ್ಬಂಧ ಇರುದರಿಂದ ದೇಶಗಳಲ್ಲಿ ಕೆಲಸ ಮಾಡುತ್ತಿರುವ ನೂರಾರು ಕನ್ನಡಿಗರು ಸೇರಿ ಸಾವಿರಾರು ಭಾರತೀಯರು ಸಂಯುಕ್ತ ಅರಬ್ ಸಂಸ್ಥಾನದ ದುಬೈ ಮೂಲಕ 16 ದಿನಗಳ ಕ್ವಾರಂಟೈನ್ ಮುಗಿಸಿ ಸೌದಿ ಮತ್ತು ಕುವೈತ್ ದೇಶಗಳಿಗೆ ತೆರಳುತ್ತಿದ್ದರು, ಆದರೆ ಕಳೆದ ಹಲವು ದಿನಗಳಿಂದ ವಿಶ್ವಾದ್ಯಂತ ಕೋರೋಣ ಆರ್ಭಟ ಹೆಚ್ಚಿದ್ದರಿಂದ ಸೌದಿ ಮತ್ತು ಕುವೈತ್ ದೇಶಗಳು ದುಬೈಯಿಂದ ಸಹ ವಾಯು ಮಾರ್ಗ ಮತ್ತು ಗಡಿಗಳನ್ನು ಮುಚ್ಚಿ ಪ್ರಯಾಣ ನಿರ್ಬಂಧ ಹೇರಿದ್ದರಿಂದ ಸಾವಿರಾರು ಅನಿವಾಸಿಗಳು ದುಬೈಯಲ್ಲಿ ಸಿಲುಕಿಕೊಂಡು ಸಂಕಷ್ಟಕ್ಕೆ ಒಳಪಟ್ಟರು .
ಇವರ ಸಂಕಷ್ಟವನ್ನು ಮನಗಂಡ ದುಬೈ ಹೆಮ್ಮೆಯ ಕನ್ನಡಿಗರು ಸಂಘವು ಸಂಕಷ್ಟಕ್ಕೆ ಒಳಪಟ್ಟ ಅನಿವಾಸಿ ಸೌದಿ ಕುವೈತ್ ಕನ್ನಡಿಗರಿಗೆ ಕರ್ನಾಟಕ ಸರ್ಕಾರ ಸಹಾಯಕ್ಕೆ ನಿಲ್ಲಬೇಕೆಂದು ಟ್ವಿಟ್ಟರ್ ಅಭಿಯಾನವನ್ನು ಕೆಲವು ದಿನಗಳ ಹಿಂದೆ ನಡೆಸಿದ್ದು ಈ ಟ್ವಿಟ್ಟರ್ ಅಭಿಯಾನವನ್ನು ದುಬೈಯಲ್ಲಿರುವ ರಾಯಭಾರಿ ಕಚೇರಿ ಗಮನಿಸಿದ್ದಲ್ಲದೆ ಇಲ್ಲಿನ ಸ್ಥಳೀಯ ಗಲ್ಫ್ ನ್ಯೂಸ್ ಪತ್ರಿಕೆಯಲ್ಲಿ ರಾಯಭಾರಿ ಕಚೇರಿ ಅಧಿಕೃತರು ವರದಿಯಲ್ಲಿ ಉಲ್ಲೇಖಿಸಿದ್ದರು.
ಸೌದಿ ಅರೇಬಿಯಾ ಮತ್ತು ಕುವೈತ್ ತೆರಳಲು ದುಬೈಗೆ ಬಂದು ಸಿಲುಕಿಕೊಂಡಿರುವ ಅನಿವಾಸಿ ಭಾರತೀಯರಿಗೆ ಭಾರತಕ್ಕೆ ಮರಳಲು ಕಾನ್ಸುಲೇಟ್ ವತಿಯಿಂದ ನೀಡುತ್ತಿರುವ ಉಚಿತ ವಿಮಾನ ಟಿಕೆಟ್ ಸೌಲಭ್ಯದ ಕನ್ನಡಿಗರ ಅರ್ಜಿಯನ್ನು ಹೆಮ್ಮೆಯ ಕನ್ನಡಿಗರು ಸಂಘದ ಅಧ್ಯಕ್ಷರಾದ ಶ್ರೀಮತಿ ಮಮತಾ ಮೈಸೂರು, ಸಂಘದ ಮುಖ್ಯ ಸಂಚಾಲಕರಾದ ರಫೀಕಲಿ ಕೊಡಗು ಮತ್ತು ಸಂಘದ ಸಲಹಾ ಸಮಿತಿ ಸದಸ್ಯರಾದ ರಾಘವೇಂದ್ರ ಅವರು ರಾಯಭಾರಿ ಕಚೇರಿ ಅಧಿಕೃತರಿಗೆ ಹಸ್ತಾಂತರಿಸಿದರು ಮತ್ತು ಶೀಘ್ರದಲ್ಲಿ ಯೋಗ್ಯ ಅರ್ಜಿದಾರರಿಗೆ ಟಿಕೆಟ್ ನೀಡಲಾಗುದು ಎಂದು ರಾಯಭಾರಿ ಕಚೇರಿ ಅಧಿಕೃತರು ತಿಳಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.