ಉಡುಪಿ (ವಿಶ್ವ ಕನ್ನಡಿಗ ನ್ಯೂಸ್ ):ಕೇರಳದ ಕಾಸರಗೋಡಿಗೆ ವಿಜಯ ಯಾತ್ರೆ ಉದ್ಘಾಟನೆ ನಿಮಿತ್ತ ಆಗಮಿಸಿದ್ದ ಉತ್ತರ ಪ್ರದೇಶದ ಮಾನ್ಯ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿ, ಉತ್ತರಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮನ ಮಂದಿರಕ್ಕೆ ಭವಿಷ್ಯದಲ್ಲಿ ಭೇಟಿ ನೀಡುವ ಕರ್ನಾಟಕದ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ಯಾತ್ರಿನಿವಾಸ ಒಂದನ್ನು ನಿರ್ಮಾಣ ಮಾಡಲು ಐದು ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ, ಈ ಹಿಂದೆ ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪನವರು ಸಲ್ಲಿಸಿದ ಮನವಿಯನ್ನು ಪುರಸ್ಕರಿಸುವಂತೆ ಮನವಿ ಮಾಡಲಾಯಿತು. ಉತ್ತರ ಪ್ರದೇಶ ಸರ್ಕಾರ ಕರ್ನಾಟಕದ ಯಾತ್ರೆ ನಿವಾಸಕ್ಕಾಗಿ ಶೀಘ್ರದಲ್ಲಿ ಭೂಮಿ ಮಂಜೂರು ಮಾಡಿದರೆ, ಯಾತ್ರಿನಿವಾಸ ನಿರ್ಮಾಣಕ್ಕೆ ಅನುಕೂಲ ಆಗುವುದಾಗಿ ಯೋಗಿ ಆದಿತ್ಯನಾಥರಲ್ಲಿ ಮನವಿ ಮಾಡಿದಾಗ ಪ್ರತಿಕ್ರಿಯಿಸಿದ ಆದಿತ್ಯನಾಥರು, ಕೂಡಲೇ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಿ, ಕರ್ನಾಟಕದಿಂದ ಆಗಮಿಸುವ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವುದಾಗಿ ಭರವಸೆ ನೀಡಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.