ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ದೇವಸ್ಯಮೂಡೂರು ಗ್ರಾಮದ ಸೀತಾ ಅವರಿಗೆ ಪ್ರಾಕೃತಿಕ ವಿಕೋಪದಡಿ ಪರಿಹಾರವಾಗಿ ಮಂಜೂರುಗೊಂಡ 25,772/- ರೂಪಾಯಿ ಹಾಗೂ ಮಣಿನಾಲ್ಕೂರು ಗ್ರಾಮದ ಚಂದ್ರಹಾಸ ಅವರಿಗೆ ಮಂಜೂರುಗೊಂಡ 45,891/- ರೂಪಾಯಿ ಚೆಕ್ಕುಗಳನ್ನು ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅವರು ಗುರುವಾರ ತಮ್ಮ ಶಾಸಕರ ಕಛೇರಿಯಲ್ಲಿ ವಿತರಿಸಿದರು. ಈ ಸಂಧರ್ಭದಲ್ಲಿ ಸರಪಾಡಿ ಪಂಚಾಯತ್ ಸದಸ್ಯರಾದ ರಾಮಕೃಷ್ಣ ಮಯ್ಯ, ಧರಣೇಂದ್ರ ಜೈನ್, ಶರ್ಮಿತ್ ಜೈನ್, ಕಾವಳಮೂಡೂರು ಉಪಾಧ್ಯಕ್ಷರಾದ ಅಜಿತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.