ಪುತ್ತೂರು(ವಿಶ್ವಕನ್ನಡಿಗ ನ್ಯೂಸ್): ಕೊರೋನ ಲಾಕ್ಡೌನ್ ನಂತರ ರಾಜ್ಯದ ಶಿಕ್ಷಣ ಕ್ಷೇತ್ರವನ್ನು ಗಮನಹರಿಸಿದಾಗ ಹಲವಾರು ಸಮಸ್ಯೆಗಳು ಗೋಚರಿಸುತ್ತಿದೆ. ಅದರಲ್ಲಿ ಮುಖ್ಯವಾಗಿ ಲಾಕ್ಡೌನ್ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗುವ ಉತ್ಸಾಹ ತೋರುತ್ತಿಲ್ಲ. ರಾಜ್ಯದಲ್ಲಿ ನಡೆದ ಕೆಲವು ಅಧ್ಯಯನಗಳ ಪ್ರಕಾರ ಮನೆಯ ಆರ್ಥಿಕ ಪರಿಸ್ಥಿತಿ , ಬಾಲ ಕಾರ್ಮಿಕತೆ, ಶಿಕ್ಷಣದ ಬಗ್ಗೆ ವಿದ್ಯಾರ್ಥಿ- ಪೊಷಕರಿಗೆ ಕಾಳಜಿಯ ಕೊರತೆ , ವಿದ್ಯಾರ್ಥಿಗಳ ಆರೋಗ್ಯ ಸಮಸ್ಯೆ,ನಿರಾಸಕ್ತಿ ಮುಂತಾದ ಹಲವಾರು ಕಾರಣಗಳಿಂದ ಕಳೆದ ಕೊರೋನಾ ಲಾಕ್-ಡೌನ್ ನಂತರ ರಾಜ್ಯದಲ್ಲೇ ಸುಮಾರು ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಶಾಲಾ – ಕಾಲೇಜುಗಳಿಗೆ ಮರು ದಾಖಲಾತಿಗಳನ್ನು ಪಡೆದಿರುವುದಿಲ್ಲ ಎಂಬ ಆಘಾತಕಾರಿ ವರದಿಯನ್ನು ನಮಗೆ ಕಾಣಲು ಸಾಧ್ಯವಾಗಿದೆ. ವಿದ್ಯಾರ್ಥಿಗಳ ಗೈರು ಹಾಜರಾತಿ ಕೂಡ ಗಣನೀಯ ಪ್ರಮಾಣದಲ್ಲಿ ಜಿಲ್ಲೆಯಲ್ಲಿ ವರದಿಯಾಗುತ್ತಿದೆ.
ಶಾಲಾ ಕಾಲೇಜು ಅರ್ಧದಲ್ಲಿ ಮೊಟಕುಗೊಳಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಬದಲಾಗಿ ಕುಟುಂಬ ನಿರ್ವಹಣೆ ಮಾಡಲು ಬೇಸಾಯ ,ಕೂಲಿ, ಕಾರ್ಖಾನೆಗಳಿಗೆ ದುಡಿಮೆಗೆ ಹೋಗುತ್ತಿದ್ದಾರೆ ಎಂಬ ಮಾಹಿತಿಗಳು ಬರುತ್ತಿದೆ.
ಇದರ ಗಂಭೀರತೆಯನ್ನು ಮನಗಂಡು ಸಮಾಜದಲ್ಲಿ ಯಾರು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದೊಂದಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ‘ಉತ್ತಮ ಭವಿಷ್ಯಕ್ಕಾಗಿ ಕಾರ್ಯಪ್ರವೃತ್ತರಾಗೋಣ’ಎಂಬ ಘೋಷಾ ವಾಕ್ಯದೊಂದಿಗೆ “ಝೀರೋ ಡ್ರಾಪ್ ಔಟ್” ಎಂಬ ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದೆ. ಈ ಅಭಿಯಾನದಲ್ಲಿ ಶಿಕ್ಷಣ ಇಲಾಖೆಯೊಂದಿಗೆ ಸಮಾಲೋಚನೆ, ವಿದ್ಯಾರ್ಥಿಗಳ ಸಮಾಲೋಚನೆ, ಜಾಗೃತಿ ಕಾರ್ಯಕ್ರಮ, ಪೋಷಕರ ಸಭೆ, ಹೆಲ್ಪ್ ಡೆಸ್ಕ್ ಮುಂತಾದ ಕಾರ್ಯಕ್ರಮಗಳು ನಡೆಯಲಿಕ್ಕಿದೆ. ಝೀರೋ ಡ್ರಾಪ್ ಔಟ್ ಅಭಿಯಾನದ ಭಾಗವಾಗಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಅಭಿಯಾನದೊಂದಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂಬ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಅನ್ಸಾರ್ ಬೆಳ್ಳಾರೆ ಜಿಲ್ಲಾ ಕಾರ್ಯದರ್ಶಿ ಮುಸ್ತಾಫಾ ಕಬಕ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.