ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಜನವಾದಿ ಮಹಿಳಾ ಸಂಘಟನೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಬೋಳಾರದ ಎಕೆಜಿ ಭವನದಲ್ಲಿ ಮಹಿಳಾ ದಿನಾಚರಣಾ ಕಾರ್ಯಕ್ರಮ ನಡೆಯಿತು. ಈ ಸಮಾರಂಭದಲ್ಲಿ ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷರಾದ ದೇವಿ ಅವರು ಭಾಗವಹಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ದುಡಿಯುವ ಮಹಿಳೆಯರ ಒಕ್ಕೂಟದ ಸಂಚಾಲಕಿ ಪದ್ಮಾವತಿ ಶೆಟ್ಟಿ ವಹಿಸಿದ್ದರು.
ವೇದಿಕೆಯಲ್ಲಿ ಜೆ.ಎಂ.ಎಸ್ ಜಿಲ್ಲಾ ಅಧ್ಯಕ್ಷೆ ಜಯಂತಿ ಬಿ ಶೆಟ್ಟಿ, ಉಪಾಧ್ಯಕ್ಷೆ ರಮಣಿ, ಜಿಲ್ಲಾ ಕಾರ್ಯದರ್ಶಿ ಭಾರತಿ ಬೋಳಾರ್, ಜಿಲ್ಲಾ ನಾಯಕಿ ರಾಧಾ, ಹೇಮಲತಾ, ಶಾಲಿನಿ ವಕೀಲರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜನವಾದಿ ಮಹಿಳಾ ಸಂಘಟನೆಯ ಮುಖಂಡರಾದ ವಿಲಾಸಿನಿ ತೊಕ್ಕೊಟ್ಟು, ಗಿರಿಜಾ, ನಳಿನಾಕ್ಷಿ, ಜಯಲಕ್ಷ್ಮೀ, ಸಿಐಟಿಯು ಮುಖಂಡರಾದ ವಸಂತ್ ಆಚಾರಿ, ಬಾಲಕೃಷ್ಣ ಶೆಟ್ಟಿ, ಬಾಬು ಪಿಲಾರ್, ಡಿವೈಎಫ್ಐ ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಕೆಸಿ ರೋಡ್ ಪಾಲ್ಗೊಂಡರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.