ಪುತ್ತೂರು(ವಿಶ್ವಕನ್ನಡಿಗ ನ್ಯೂಸ್): ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕದ ರಾಜ್ಯಾದ್ಯಂತ ಝೀರೋ ಡ್ರಾಪೌಟ್ ಅಭಿಯಾನ ನಡೆಯುತ್ತಿದ್ದು, ಇದರ ಭಾಗವಾಗಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ನಡೆಸಿ ಹಿಂದಿರುಗುವ ವೇಳೆ ಗಾಂಜಾ ವ್ಯಸನಿಗಳು ಕ್ಯಾಂಪಸ್ ಫ್ರಂಟ್ ನಾಯಕರ ಮೇಲೆ ಹಲ್ಲೆ ನಡೆಸಿದ್ದು, ಮಾತ್ರವಲ್ಲದೆ ಸ್ಥಳಕ್ಕಾಗಮಿಸಿದ ಉಳ್ಳಾಲ ಪೋಲಿಸರು ಹಲ್ಲೆಗೊಳಗಾದವರನ್ನೇ ಬಂಧಿಸಿ, ಠಾಣೆಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿ, ಧಾರ್ಮಿಕ ನಿಂದನೆ ನಡೆಸಿ, ಮಾರ್ಮಾಂಗಕ್ಕೆ ತಮ್ಮ ಬೂಟುಗಳಿಂದ ಒದ್ದು ತೀವ್ರ ಹಲ್ಲೆ ನಡೆಸಿದ್ದು ಇದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಮಿನಿ ವಿಧಾನ ಸೌದದ ಮುಂಭಾಗ ಪ್ರತಿಭಟನೆ ನಡೆಸಿದರು.
ಹಲ್ಲೆಗೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕಾದ ಪೊಲೀಸರೆ ನಡೆಯು ಸಂಶಯ ರೂಪವಾಗಿದ್ದು ಉಳ್ಳಾಲ ಪೊಲೀಸರು ಜನ ಸಾಮಾನ್ಯರಿಗಾಗಿ ಕರ್ತವ್ಯ ನಿಭಾಯಿಸುತ್ತಾರೋ ಅಥವಾ ಯಾವುದೊ ಒಂದು ಸಂಘಟನೆಗೆ ಬೇಕಾಗಿ ಕೆಲಸ ಮಾಡುತ್ತಿದ್ದಾರೋ ಎನ್ನುವ ಸಂಶಯ ಮೂಡಿಬರುತ್ತಿದೆ, ಒಂದು ವೇಳೆ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ ಪೊಲೀಸರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಲ್ಲದಿದ್ದರೆ ಮುಂದಿನ ದಿನದಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಪೋಲಿಸು ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಅನ್ಸಾರ್ ಬೆಳ್ಳಾರೆ ಹೇಳಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಜೊತೆ ಕಾರ್ಯದರ್ಶಿ ಫಾರೂಕ್ ಕಬಕ,ಜಿಲ್ಲಾ ಸಮಿತಿ ಸದಸ್ಯರಾದ ಸುಹೈಲ್ ಸುಳ್ಯ, ಸಂಟ್ಯಾರ್ ಏರಿಯಾ ಅಧ್ಯಕ್ಷರಾದ ಆರಿಫ್ ಬೆಟ್ಟಪಾಡಿ, ಕಾರ್ಯದರ್ಶಿಯಾದ ಸಫೀರ್ ಕಲ್ಲಾರ್ಪೆ ಉಪಸ್ಥಿತರಿದ್ದರು, ಜಿಲ್ಲಾ ಕಾರ್ಯದರ್ಶಿ ಮುಸ್ತಾಫಾ ಕಬಕ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.