ಕುಂಬಳೆ (ವಿಶ್ವ ಕನ್ನಡಿಗ ನ್ಯೂಸ್) : ಶೈಕ್ಷಣಿಕ ಕ್ರಾಂತಿಯ ರೂವಾರಿಯೂ, ಧಾರ್ಮಿಕ ವಿದ್ವಾಂಸರೂ, ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾದ ಉಪಾಧ್ಯಕ್ಷರೂ ಆಗಿದ್ದ ಶೈಖುನಾ ತಾಜು ಶರೀಅಃ ಅಲಿ ಕುಂಞಿ ಉಸ್ತಾದರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ.
ಕಳೆದ ಕೆಲ ಸಮಯಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಮ್ಮನ್ನು ಅಗಲಿದ್ದಾರೆ.
ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾದ ಉಪಾಧ್ಯಕ್ಷರಾಗಿದ್ದ ಅವರು ದ.ಕ ಮತ್ತು ಕಾಸರಗೋಡು ಜಿಲ್ಲೆಯ ಹಲವು ಮೊಹಲ್ಲಾಗಳ ಖಾಝಿಯಾಗಿ ಕಾರ್ಯನಿರ್ವಹಿಸಿದ್ದರು. ಶಿರಿಯಾ ಲತೀಫಿಯ್ಯಾ ಎಜುಕೇಶನಲ್ ಕಾಂಪ್ಲೆಕ್ಸ್ ಇದರ ಅಧ್ಯಕ್ಷರಾಗಿದ್ದ ಅವರು ನಾಡಿನ ಪ್ರಮುಖ ವಿದ್ವಾಂಸರಾಗಿ ಗುರುತಿಸಲ್ಪಟ್ಟಿದ್ದರು.
ಕುಂಬಳೆ ಸಮೀಪದ ಶಿರಿಯಾ ನಿವಾಸಿಯಾದ ಇವರ ಅಗಲಿಕೆ ರಾಜ್ಯದ ವಿವಿಧ ಸಂಘಟನೆಗಳು, ಸಾಮಾಜಿಕ, ಧಾರ್ಮಿಕ, ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ, ಅವರು ಪತ್ನಿ, ನಾಲ್ವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧುಗಳ ಮತ್ತು ಸಾವಿರಾರು ಶಿಷ್ಯಂದಿರನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.