ಚಿಕ್ಕಬಳ್ಳಾಪುರ.(ವಿಶ್ವಕನ್ನಡಿಗ ನ್ಯೂಸ್): ನಗರ ಪ್ರದೇಶದ ಮಾದರಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ವೈಜ್ಞಾನಿಕವಾಗಿ ಕಸವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದ್ದು ಜಿಲ್ಲೆಯಲ್ಲಿ ಸ್ವಚ್ಚ ಭಾರತ್ ಅಭಿಯಾನ ಯೋಜನೆಯಡಿ 38 ಘನ ತ್ಯಾಜ್ಯ ವಿಲೇವಾರಿ ಘಟಕಗಳನ್ನು ನಿರ್ಮಿಸಲಾಗಿದ್ದು ಈ ತಿಂಗಳ ಅಂತ್ಯದೊಳಗೆ ಹೆಚ್ಚುವರಿ 25 ಘಟಕಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಪಂ ಉಪಕಾರ್ಯದರ್ಶಿ ಡಾ. ಎನ್ ನೋಮೇಶ್ಕುಮಾರ್ ತಿಳಿಸಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಳೆದ ಸಾಲಿನಲ್ಲಿ 69 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಿ ಕೃಷಿ ತೋಟಗಾರಿಕೆ ರೇಷ್ಮೆ ಹಾಗೂ ಪಶುಸಂಗೋಪನೆ ಕಾಮಗಾರಿಗಳು ಜೊತೆಗೆ ಅಂತರ್ಜಲಮಟ್ಟವನ್ನು ವೃದ್ದಿಗೊಳಿಸುವ ಕೆರೆಗಳ ಪುನಶ್ಚೇತನ ಕಾಲುವೆಗಳ ನಿರ್ಮಾಣ ನೀರಿನ ಹೊಂಡಗಳು ಬಹುಕಮಾನ್ ಚೆಕ್ಡ್ಯಾಮ್ಗಳು ಮಳೆನೀರು ಪದ್ದತಿ ಬದುಗಳ ನಿರ್ಮಾಣ ಬಚ್ಚಲುಗುಂಡಿಗಳು, ಗೋ ಕುಂಟೆ ಹಾಗೂ ಕಲ್ಯಾಣಿಗಳನ್ನು ನಿರ್ಮಿಸಲು ಆದ್ಯತೆ ನೀಡಲಾಗಿದೆ ಅದೇ ರೀತಿ ಪ್ರಸಕ್ತ ಸಾಲಿನಲ್ಲಿ 90 ಲಕ್ಷ ಮಾನವ ದಿನಗಳನ್ನು ಸೃಜನ ಮಾಡಿ ಗ್ರಾಮೀಣ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳನ್ನು ವೃದ್ದಿಗೊಳಿಸಲು ಯೋಜನೆ ರೂಪಿಸಲಾಗಿದ್ದು ಗ್ರಾಪಂ ಅಧಿüಕಾರಿಗಳು ಇದಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್, ಮಜಿನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಜಿಪಂಯ ಮಧು ಹಾಗೂ ವಿವಿಧ ಗ್ರಾಪಂಗಳ ಅಭಿವೃದ್ದಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.