ಚಿಕ್ಕಬಳ್ಳಾಪುರ.(ವಿಶ್ವಕನ್ನಡಿಗ ನ್ಯೂಸ್):ಜಿಲ್ಲೆಯ ಹೊಸಹುಡ್ಯ ಗ್ರಾಪಂಯಲ್ಲಿ ಭ್ರಷ್ಟಚಾರ ತಾಂಡವಾಡುತ್ತಿದ್ದು ಗ್ರಾಪಂ ಅಭಿವೃದ್ದಿ ಅಧಿಕಾರಿ ಪ್ರತಿಯೊಂದು ಕೆಲಸಗಳಿಗೆ ಹಣ ಕೇಳಿ ಬಡವರು ಮತ್ತು ಜನಸಾಮಾನ್ಯರನ್ನು ಸುಲಿಗೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಗ್ರಾಪಂಯಲ್ಲಿ ಇ ಖಾತೆ ಮಾಡಲು ಬಡವರು ಸಲ್ಲಿಸಿದ ಅರ್ಜಿಗಳಿಗೆ ಬೆಲೆ ಇಲ್ಲದಂತಾಗಿದೆ ಯಾವುದಾದರು ಬಡಾವಣೆ ಮಾಲೀಕರು ಸಲ್ಲಿಸುವ ಅರ್ಜಿಗಳಿಗೆ ತ್ವರಿತವಾಗಿ ಸ್ಪಂದಿಸಿ ಕೆಲಸಗಳನ್ನು ಮಾಡಿಕೊಡುತ್ತಾರೆ ಆದರೆ ಬಡವರು ಮತ್ತು ಕೂಲಿಕಾರ್ಮಿಕರು ಇ ಖಾತೆ ಮಾಡಿಕೊಳ್ಳಲು ಬಂದರೆ ಅವರಿಗೆ ತಲಾ 20 ಸಾವಿರ ರೂ.ಗಳು ನೀಡುವಂತೆ ಪಿಡಿಓ ಪೀಡಿಸುತ್ತಿದ್ದಾರೆ ಇಲಾಖೆಯ ಹಿರಿಯ ಅಧಿಕಾರಿಗಳು ತನಿಖೆ ನಡೆಸಿ ಭ್ರಷ್ಟ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸಬೇಕೆಂದು ಪ್ರತಿಭಟನಕಾರರರು ಒತ್ತಾಯಿಸಿದರು.
ಗ್ರಾಪಂಯ ಅಭಿವೃದ್ದಿಯ ಅಧಿಕಾರಿ ಮಂಜುನಾಥ್ ಎಂಬುವವರು ಗ್ರಾಪಂ ಕೇಂದ್ರವನ್ನು ಭ್ರಷ್ಟಚಾರದ ಕೇಂದ್ರವನ್ನಾಗಿಸಿದ್ದಾರೆ ಇಲ್ಲಿ ಪ್ರತಿಯೊಂದು ಕೆಲಸಕ್ಕೆ ಲಂಚ ನೀಡುವ ಪರಿಸ್ಥಿತಿ ನಿರ್ಮಾಣವಾಗಿದೆ ಇ ಖಾತೆ ಮಾಡಿಕೊಡಲು ಹಿರಿಯ ಅಧಿಕಾರಿಗಳಿಗೆ ಹಣ ನೀಡಬೇಕೆಂದು ನೇರವಾಗಿ ಹೇಳುತ್ತಾರೆ ಈ ಲಂಚಾವತಾರದಲ್ಲಿ ಯಾವ ಹಿರಿಯ ಅಧಿಕಾರಿಗಳು ಶಾಮಿಲಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಿ ಬಡವರ ಇ ಖಾತೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಗ್ರಾಪಂ ಸದಸ್ಯ ಮಂಜುನಾಥ್ ಒತ್ತಾಯಿಸಿದ್ದಾರೆ.
ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ವಿರುದ್ದ ದಿಕ್ಕಾರದ ಘೋಷಣೆಗಳನ್ನು ಕೂಗಿದ ಗ್ರಾಮಸ್ಥರು ಕೂಡಲೇ ಈ ಅಧಿಕಾರಿಯ ಮೇಲೆ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು ವಿಷಯ ತಿಳಿದ ಕೂಡಲೇ ಜಿಪಂ ಯೋಜನಾ ನಿರ್ದೇಶಕ ಗಿರಿಜಾ ಶಂಕರ್, ತಾಪಂ ಇಒ ಹರ್ಷವರ್ಧನ್ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಸಮಾಲೋಚನೆ ನಡೆಸಿ ಈ ಸಂಬಂಧ ತನಿಖೆ ನಡೆಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ವಾಪಸ್ ಪಡೆದುಕೊಂಡರು.
ಪ್ರತಿಭಟನೆಯಲ್ಲಿ ವೆಂಕಟಕೃಷ್ಣಪ್ಪ, ಗಿಡ್ನಹಳ್ಳಿ ಗಂಗಾಧರ್, ಹೊಸಹುಡ್ಯ ನಾರಾಯಣಸ್ವಾಮಿ, ವೆಂಕಟರಾಜು, ನರಸಿಂಹಪ್ಪ, ಗಂಗರಾಜಮ್ಮ, ಜಯಮ್ಮ, ಪ್ರಭಾವತಿ ಮತ್ತಿತರರು ಉಪಸ್ಥಿತರಿದ್ದರು.
ಕೋಟ್: ಗ್ರಾಪಂಯ ವ್ಯಾಪ್ತಿಯಲ್ಲಿ ಸಮುದಾಯ ಶೌಚಾಲಯ ನಿರ್ಮಿಸುವ ವಿಚಾರದಲ್ಲಿ ಬಿಲ್ ಮಾಡಿಕೊಟ್ಟರೂ ಸಹ ಹೆಚ್ಚುವರಿಯಾಗಿ ಬಿಲ್ ಮಾಡಿಕೊಡಲು ಒತ್ತಾಯಿಸಿ ಗಲಾಟೆ ಮಾಡಿದ್ದಾರೆ ಆ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಗ್ರಾಮ ಪಂಚಾಯಿತಿಯಲ್ಲಿ ಯಾವ ರೀತಿಯ ಭ್ರಷ್ಟಚಾರ ಮಾಡುತ್ತಿಲ್ಲ ಆರೋಪ ನಿರಾಧಾರ ಎಂದು ಗ್ರಾಪಂ ಅಭಿವೃದ್ದಿ ಅಧಿಕಾರಿ ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ.
ವರದಿ: ತೆ.ಮೀಂ.ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.