ದೋಹ (www.vknews.com) : ಅನಿವಾಸಿ ಭಾರತೀಯರ ವೇದಿಕೆಯಾದ ಕತಾರ್ ಇಂಡಿಯನ್ ಸೋಷಿಯಲ್ ಫೋರಂ (QISF) ನ ಕಾರ್ಯದರ್ಶಿ, ಅನಿವಾಸಿ ಭಾರತೀಯರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನೆರವಾಗುತ್ತಿದ್ದ, ಸಮಾಜ ಸೇವೆ ಮತ್ತು ಮಾವವೀಯ ಕಾರ್ಯಗಳಲ್ಲಿ ಯಾವಾಗಲೂ ಮುಂಚೂಣಿಯಲ್ಲಿದ್ದು, ಕತಾರ್ ನಲ್ಲಿ ಎಲ್ಲರಿಗೂ ಚಿರಪರಿಚಿತರಾಗಿದ್ದ ಅಬ್ದುಲ್ ಲತೀಫ್ ಮಡಿಕೇರಿ ಇಂದು ಮುಂಜಾನೆ ಇಹಲೋಕವನ್ನು ತ್ಯಜಿಸಿದ್ದಾರೆ.
ಕಳೆದ 30 ವರ್ಷಗಳಿಂದ, ಕತಾರ್ ನ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು, ಪತ್ನಿ, ಮೂರು ಪುತ್ರರು, ಓರ್ವ ಪುತ್ರಿ, ಅಪಾರ ಬಂಧು ಬಳಗ ಮತ್ತು ಮಿತ್ರರನ್ನು ಅಗಲಿದ್ದಾರೆ. ಇವರ ಅಗಲಿಕೆಗೆ ಕತಾರ್ ಇಂಡಿಯನ್ ಸೋಷಿಯಲ್ ಫೋರಂ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ ಮತ್ತು ಈ ಅಗಲಿಕೆ ತುಂಬಲಾರದ ಅತಿ ದೊಡ್ಡ ನಷ್ಟವಾಗಿದೆ.
ಸರ್ವಶಕ್ತನು, ಲತೀಫ್ ಮಡಿಕೇರಿ ಯವರ ಕುಟುಂಬದ ಸದಸ್ಯರಿಗೆ ಭರಿಸಲಾರದಂತಹ ಈ ನಷ್ಟವನ್ನು ಸಹಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಕತಾರ್ ಇಂಡಿಯನ್ ಸೋಷಿಯಲ್ ಫೋರಂ ಪ್ರಾರ್ಥಿಸುತ್ತದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.