ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ದಕ್ಷಿಣ ಕನ್ನಡ ಮಕ್ಕಳ ಪಾಲನಾ ಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕಿನ ಮೂರ್ಖಾಜೆಯ ಅಜೇಯ ಟ್ರಸ್ಟ್ ಸಂಸ್ಥೆಯವರು ನಡೆಸುತ್ತಿರುವ ಮೈತ್ರೇಯಿ ಗುರುಕುಲ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ಪಾಲನೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳು ಇಲ್ಲದಿರುವುದರಿಂದ ಸಂಸ್ಥೆಯ ನೋಂದಣಿಯನ್ನು (ನೋಂದಣಿ ಸಂಖ್ಯೆ: ಏಂ210002ಔಂ13) ಸಂಸ್ಥೆಯ ಅಧ್ಯಕ್ಷರ ಕೋರಿಕೆಯ ಮೇರೆಗೆ ಹಾಗೂ ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಶಿಫಾರಸ್ಸಿನಂತೆ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ, 2015 ಸೆಕ್ಷನ್ 41 (7) ರ ಅನ್ವಯ ಪ್ರದತ್ತವಾದ ಅಧಿಕಾರಿ ಚಲಾಯಿಸಿ ಸದರಿ ಸಂಸ್ಥೆಯ ನೋಂದಣಿಯನ್ನು ಎಪ್ರಿಲ್ 5 ರಿಂದ ಅನ್ವಯವಾಗುವಂತೆ ರದ್ದುಗೊಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಯವರ ಕಚೇರಿ ದೂ. ಸಂಖ್ಯೆ: 0824-2440004 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.