ಕೋಲ್ಕತ್ತಾ(ವಿಶ್ವಕನ್ನಡಿಗ ನ್ಯೂಸ್): ನಂದಿಗ್ರಾಮ ಕ್ಷೇತ್ರದಲ್ಲಿ ದೊಡ್ಡ ಟ್ವಿಸ್ಟ್ ಸಂಭವಿಸಿದ್ದು ಸಿಎಂ ಮಮತಾ ಬ್ಯಾನರ್ಜಿ ಅವರು ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ ಎಂದು ಚುನಾವಣಾ ಆಯೋಗ ಘೋಷಣೆ ಮಾಡಿದ್ದಾರೆ.
ಮಾಧ್ಯಮಗಳಲ್ಲಿ ಮೊದಲಿಗೆ ಮಮತಾ ಬ್ಯಾನರ್ಜಿ ಅವರು 1200 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಪ್ರಸಾರವಾಗಿತ್ತು. ಇದೀಗ ಚುನಾವಣೆ ಆಯೋಗ ಅಂತಿಮ ಫಲಿತಾಂಶ ಘೋಷಿಸಿದ್ದು ಈ ಮೂಲಕ ಮಮತಾ ಬ್ಯಾನರ್ಜಿ ಅವರು 1927 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
ನಂದಿಗ್ರಾಮ ಸೋಲಿನ ಬಗ್ಗೆ ಮಾತನಾಡಿರುವ ಮಮತಾ ಬ್ಯಾನರ್ಜಿ ಅವರು, ನಾನು ಜನರ ತೀರ್ಪಿಗೆ ತಲೆ ಬಾಗುತ್ತೇನೆ. ನಂದಿಗ್ರಾಮದಲ್ಲಿ ನನ್ನ ಸೋಲನ್ನು ಒಪ್ಪಿಕೊಳ್ಳುತ್ತೇನೆ. ಮೊದಲಿಗೆ ಚುನಾವಣಾ ಆಯೋಗ ನಾನು ಗೆದ್ದಿರುವುದಾಗಿ ಹೇಳಿತ್ತು. ಆದರೆ ಇದೀಗ 1927 ಮತಗಳ ಅಂತರದಿಂದ ಸೋತಿರುವುದಾಗಿ ಘೋಷಿಸಿದೆ. ಈ ಸಂಬಂಧ ನಾನು ನ್ಯಾಯಾಲಯದ ಮೆಟ್ಟಿಲೇರುತ್ತೇನೆ ಎಂದರು.
ಮಮತಾ ಅವರು ಮಾತನಾಡಿ ಬಂಗಾಳದಲ್ಲಿ ಟಿಎಂಸಿ ಅಭೂತಪೂರ್ವ ಸಾಧನೆ ಮಾಡಿದ್ದು 221 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ಸೋಲು ಕಂಡಿದೆ ಎಂದು ಮಮತಾ ಬ್ಯಾನರ್ಜಿ ಮಾದ್ಯಮದವರೊಂದಿಗೆ ಮಾತನಾಡುತ್ತಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.