(www.vknews.com) : ನಾಳೆಯಿಂದ ಲಾಕ್ ಡೌನ್ ಗೆ ಸರಕಾರ ಹೊಸ ಮಾರ್ಗಸೂಚಿ ತಯಾರಿಸಿದ್ದು ಇದರಂತೆ ಜನರು ತಮ್ಮ ಅಗತ್ಯ ವಸ್ತುಗಳ ಖರೀದಿಗೆ ವಾಹನಗಳನ್ನು ಬಿಟ್ಟು ನಡೆದುಕೊಂಡೇ ಹೋಗಬೇಕೆಂದು ಸರಕಾರ ಆದೇಶ ನೀಡಿದೆ.ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿದ ಶಾಸಕ ಯು.ಟಿ.ಖಾದರ್ ಕೆಲವೊಂದು ಪ್ರದೇಶಗಳಲ್ಲಿ ಅಗತ್ಯ ವಸ್ತುಗಳ ಖರೀದಿಗಾಗಿ ದೂರ ಸಂಚರಿಸಬೇಕಾಗಿರುವುದರಿಂದ ಆಯಾ ಪ್ರದೇಶ ವ್ಯಾಪ್ತಿಯಲ್ಲಿ ಒಂದು ವಾಹನದಲ್ಲಿ ಒಬ್ಬ ಮಾತ್ರ ಹೋಗಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದರು.
ಈ ಬಗ್ಗೆ ಸರಕಾರದ ಮಾರ್ಗಸೂಚಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಶಾಸಕ ಯು.ಟಿ.ಖಾದರ್ ರವರಿಗೆ ಭರವಸೆ ನೀಡಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.