ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಯೋರ್ವಳು ಸಾವನ್ನಪ್ಪಿದ್ದ ಘಟನೆ ನಡೆದಿದ್ದು, ಈಕೆಯ ಸಾವಿಗೆ ವೈದ್ಯರೇ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ವಿಟ್ಲ ಸಮೀಪದ ಸಾಲೆತ್ತೂರಿನ ಮಗಿಳೆ ಭಾರತಿ ರೈ(52) ಮೃತರಾದವರು. ಅವರನ್ನು ಪುತ್ತೂರಿನಲ್ಲಿ ಚಿಕಿತ್ಸೆಗೆ ಕರೆದೊಯ್ದಾಗ ಪಲ್ಸ್ ರೇಟ್ ಕಡಿಮೆ ಇದ್ದ ಕಾರಣ ಮಂಗಳೂರು ವೆನ್ಲಾಕ್,ನಲ್ಲಿ ದಾಖಲಾಗಿದ್ದರು.
ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಆ ಮಹಿಳೆಯು ನಿಧನರಾಗಿದ್ದಾರೆ. ಇವರ ಸಾವಿಗೆ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯ ಎಂದು ಆರೋಪಿಸಿ ಸಂಬಂಧಿಕರು ಗಲಾಟೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ಸುಧಾರಿಸುವ ಪ್ರಯತ್ನ ಮಾಡಿದ್ದಾರೆ.
ಶಾಸಕ ವೇದವ್ಯಾಸ ಕಾಮತ್ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಮೃತರ ಕುಟುಂಬದವರಿಗೆ ಸಾಂತ್ವಾನ ಹೇಳುವ ಮೂಲಕ ಮಾತುಕತೆ ನಡೆಸಿದ್ದಾರೆ ಹಾಗೂ ವೈದ್ಯರ ಜೊತೆಗೆ ಕೂಡ ಮಾತುಕತೆ ನಡೆಸಿದ್ದಾರೆ. ವೆಂಟಿಲೇಟರ್ ಸಮಸ್ಯೆಯಿಂದಾಗಿ ಮಹಿಳೆಯ ಸಾವು ಆಗಿದೆಯೇ ಎನ್ನುವ ಬಗ್ಗೆ ಪೊಲೀಸರು ಮತ್ತು ಜಿಲ್ಲಾಡಳಿತ ತನಿಖೆ ಅತೀ ಶೀಘ್ರವಾಗಿ ನಡೆಸಬೇಕಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.