ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಸುಳ್ಯ ತಾಲೂಕಿನಲ್ಲಿ ನಡೆಯುತ್ತಿದ್ದ ಅಕ್ರಮ ಬಂದೂಕು ತಯಾರಿಕಾ ಘಟಕದ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಎಸ್ಡಿಪಿಐ ವತಿಯಿಂದ ಪುತ್ತೂರು ಸಹಾಯಕ ಪೋಲಿಸ್ ಅಧೀಕ್ಷಕರಿಗೆ, ಸುಳ್ಯ ವೃತ್ತ ನಿರೀಕ್ಷಕರಿಗೆ ಮತ್ತು ಸುಬ್ರಹ್ಮಣ್ಯ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ದುಲ್ ಕಲಾಂ ಸುಳ್ಯ,ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಸಿದ್ದೀಕ್ ಕೆ.ಎ ,ಜಿಲ್ಲಾ ಸಮಿತಿ ಸದಸ್ಯ ಜಾಬಿರ್ ಅರಿಯಡ್ಕ , ಸುಳ್ಯ ಎಸ್ ಡಿಪಿಐ ಕಾರ್ಯದರ್ಶಿ ಮುಸ್ತಫಾ ಎಂ.ಕೆ, ಎಸ್ ಡಿಪಿಐ ಕಡಬ ತಾಲೂಕು ಕಾರ್ಯದರ್ಶಿ ರಫೀಕ್ ನೆಲ್ಯಾಡಿ,ತಾಲೂಕು ಸಮಿತಿ ಉಪಾಧ್ಯಕ್ಷ ನೌಶಾದ್ ಕಡಬ, ಶಾಕಿರ್ ಅಳಕೆಮಜಲು, ಅಥಾವುಲ್ಲಾ ಸುಳ್ಯ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.