ಉಳ್ಳಾಲ(ವಿಶ್ವಕನ್ನಡಿಗ ನ್ಯೂಸ್): ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಆಗಿರುವ ವಾಯುಭಾರ ಕುಸಿತದ ಪರಿಣಾಮ ಉಳ್ಳಾಲಕ್ಕೂ ತಟ್ಟಿದೆ. ಉಚ್ಚಿಲ ಬಟ್ಟಪ್ಪಾಡಿ ಭಾಗದಲ್ಲಿ 67 ಮನೆಗಳು ಅಪಾಯದಂಚಿನಲ್ಲಿದ್ದರೆ, ಸೋಮೇಶ್ವರ ಹಿಂದೂ ಸ್ಮಶಾನದ ತಡೆಗೋಡೆ ಸಮುದ್ರ ಪಾಲಾಗಿದೆ.
ಅಗತ್ಯ ಬಿದ್ದಲ್ಲಿ ಸಮುದ್ರ ತೀರದ ಮಂದಿಗೆ ತಂಗಲು ಉಳ್ಳಾಲದಲ್ಲಿ ಮೂರು ಹಾಗೂ ಸೋಮೇಶ್ವರದಲ್ಲಿ ಒಂದು ಕಾಳಜಿ ಕೇಂದ್ರವನ್ನು ತೆರೆಯಲಾಗಿದೆ. ಉಚ್ಚಿಲ ಬೋವಿ ಶಾಲೆ, ಒಂಬತ್ತುಕೆರೆ ಪ್ರಾಕೃತಿಕ ವಿಕೋಪಕ್ಕೊಳಗಾದವರ ಕಟ್ಟಡ, ಉಳ್ಳಾಲ ದರ್ಗಾ ಹಾಗೂ ಪೆರ್ಮನ್ನೂರು ಸಂತ ಸೆಬೆಸ್ತಿಯನ್ನರ ಶಾಲೆಯನ್ನು ಕಾಳಜಿ ಕೇಂದ್ರವಾಗಿ ರಚಿಸಲಾಗಿದೆ. ಗಾಳಿ ಮಳೆ ಹಾಗೂ ಕಡಲ್ಕೊರೆತ ಅಧಿಕವಾದಲ್ಲಿ ಸ್ಥಳೀಯರಿಗೆ ತುರ್ತಾಗಿ ನಿಲ್ಲಲು ಕಾಳಜಿ ಕೇಂದ್ರವನ್ನು ತೆರೆಯಲಾಗಿದೆ.
ತಹಶೀಲ್ದಾರ್ ನೇತೃತ್ವದಲ್ಲಿ ಸೋಮೇಶ್ವರ, ಉಳ್ಳಾಲ ನಗರಸಭೆಯ ಪೌರಾಯುಕ್ತರು ಹಾಗೂ ಮುಖ್ಯಾಧಿಕಾರಿಗಳ ಜೊತೆಗೆ ತುರ್ತು ಸಭೆ ನಡೆಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.